Breaking News

ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ.

Spread the love

ದಾವಣಗೆರೆ : ಲೋಕಸಭೆ ಚುನಾವಣೆಯಲ್ಲಿ ಯಾರ ಬಳಿ ಎಷ್ಟು ಕೋಟಿ ರೂಪಾಯಿ ಹಣ ಪಡೆದಿದ್ದೀಯಾ ಎಂಬುದು ಗೊತ್ತಿದೆ. ಭದ್ರಾವತಿಯಲ್ಲಿ ಯಾವ ಮಹಿಳೆ‌ ಮನೆಗೆ ಮರಳು ಕಳಿಸುತ್ತಿದ್ದರು ಎಂಬುದು ಗೊತ್ತಿದೆ ಎಂದು ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ.

ರೇಣುಕಾಚಾರ್ಯಗೆ ಸವಾಲು ಹಾಕಿದ ಶಾಸಕ: ದಾವಣಗೆರೆ ನಗರದ ಆಂಜನೇಯ ಬಡಾವಣೆಯ ನಿವಾಸದಲ್ಲಿ ಮಾತನಾಡಿದ ಅವರು, ಕ್ಯಾಶಿನೋ ನಡೆಸುತ್ತಿದ್ದೇವೆ, ಇಸ್ಪೀಟು, ಐಪಿಎಲ್ ಬೆಟ್ಟಿಂಗ್ ಆಡಿಸುತ್ತೇವೆ ಎಂದು ಆರೋಪ ಮಾಡಿದ್ದೀರಿ. ಇದು ರಾಜಕೀಯ ಚಪಲಕ್ಕೆ ಹೇಳಿದ್ದಾರೆ. ನನ್ನ ಮೇಲೆ ಮಾಡಿದ ಆರೋಪಗಳ ಬಗ್ಗೆ ಮಾವಿನಹೊಳೆ ಮಹಾರುದ್ರಸ್ವಾಮಿ ಪುಣ್ಯಕ್ಷೇತ್ರಕ್ಕೆ ಬಂದು ಪ್ರಮಾಣ‌ ಮಾಡಿ, ಇಲ್ಲದಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳಿ ಎಂದು ಒತ್ತಾಯಿಸಿದ್ದಾರೆ.ಹೊನ್ನಾಳಿಯಲ್ಲಿ ಮರಳು ದಂಧೆ ಮಾಡ್ತಿದ್ದರು. ನೀವು ಯಾರ್ಯಾರಿಗೆ ಮರಳು ಮಾರಿದ್ದೀರಿ ಎಂಬುದು ನನಗೆ ಗೊತ್ತಿದೆ. ನಮ್ಮ ಸಮಾಜದ ಯುವಕರನ್ನ ಕಟ್ಟಿಕೊಂಡು ಈ ರೀತಿ ಹೇಳಿಕೆ ನೀಡಿದ್ದೀರಿ.‌ ನಾನು ಲಾಟರಿ ಶಾಸಕನಲ್ಲ, ನಾನು ಕೊರೊನಾ ಕಾಲದಲ್ಲಿ ಮಾಡಿದ ಕೆಲಸ ಮರೆತಿಲ್ಲ. ದೇವರಹಳ್ಳಿ ಕೆರೆಗೆ ನಾನೇ ಸ್ವಂತ ಖರ್ಚಿನಲ್ಲಿ ನೀರು ತುಂಬಿದ್ದೇನೆ. 60 ಸಾವಿರ ಆಹಾರದ ಕಿಟ್ ವಿತರಿಸಿದ್ದೇನೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ