Breaking News

ಮಾಟ ಮಂತ್ರ.. ಖಾರದ ಪುಡಿ ತಂತ್ರ: ಬ್ಯಾಂಕ್​ನಲ್ಲಿ 58 ಕೆಜೆ ಚಿನ್ನ ದರೋಡೆ ಕೇಸ್​; ಮ್ಯಾನೇಜರ್​ ಸೇರಿ ಮೂವರ ಬಂಧನ

Spread the love

ವಿಜಯಪುರ: ಕಳೆದ ತಿಂಗಳು ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್​ನಲ್ಲಿ ನಡೆದಿದ್ದ ಕೋಟ್ಯಾಂತರ ಮೌಲ್ಯದ ಬಂಗಾರ ಹಾಗೂ ನಗದು ದರೋಡೆ ಪ್ರಕರಣವನ್ನು ವಿಜಯಪುರ ಪೊಲೀಸರು ಭೇದಿಸಿದ್ದಾರೆ.

ಮೇ 25 ರಂದು ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್​ನ ಲಾಕರ್​ನಲ್ಲಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆ.ಜಿ (58,976.94 ಗ್ರಾಂ) ಬಂಗಾರದ ಆಭರಣಗಳು ಹಾಗೂ ರೂ. 5,20,450 ನಗದು ದರೋಡೆಯಾಗಿತ್ತು. ಪ್ರಕರಣವನ್ನು ಭೇದಿಸಿರುವ ಪೊಲೀಸರು, ಕೆನರಾ ಬ್ಯಾಂಕ್‌ನ ಸೀನಿಯರ್ ಮ್ಯಾನೇಜರ್ ಆಗಿದ್ದ, ಸದ್ಯ ವಿಜಯಪುರ ಜಿಲ್ಲೆಯ ರೋಣಿಹಾಳ್​ ಗ್ರಾಮದ ಕೆನರಾ ಬ್ಯಾಂಕ್​ನಲ್ಲಿ ಮ್ಯಾನೇಜರ್​ ಆಗಿರುವ ವಿಜಯಕುಮಾರ್​ ಮಿರಿಯಾಲ, ಹುಬ್ಬಳ್ಳಿಯ ಖಾಸಗಿ ಕಂಪೆನಿ ಉದ್ಯೋಗಿ ಚಂದ್ರಶೇಖರ್​ ನೆರೆಲ್ಲಾ, ಸುನೀಲ್ ಮೋಕಾ ಎಂಬವರನ್ನು ಬಂಧಿಸಿದ್ದಾರೆ.

ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಪ್ರಕರಣದ ಕುರಿತು ಮಾಹಿತಿ ನೀಡಿದ ಎಸ್ಪಿ ಲಕ್ಷ್ಮಣ ನಿಂಬರಗಿ, “ಬಂಧಿತ ಆರೋಪಿಗಳು ಹುಬ್ಬಳ್ಳಿಯವರು. ಆರೋಪಿಗಳು ವ್ಯವಸ್ಥಿತವಾಗಿ ಒಳಸಂಚು ಮಾಡಿ ಬ್ಯಾಂಕಿನಲ್ಲಿದ್ದ ಬೃಹತ್ ಮೊತ್ತದ ಬಂಗಾರದ ಆಭರಣಗಳನ್ನು ಹಾಗೂ ನಗದು ಹಣವನ್ನು ದೋಚಿಕೊಂಡು ಹೋಗಿದ್ದಲ್ಲದೆ, ತನಿಖೆಯ ದಿಕ್ಕು ತಪ್ಪಿಸುವಂತಹ ಹಲವಾರು ದೃಶ್ಯಾವಳಿಗಳನ್ನು ಸೃಷ್ಟಿಸಿದ್ದರೂ ಪ್ರಕರಣವನ್ನು ಭೇದಿಸಲಾಗಿದೆ ಎಂದು ತಿಳಿಸಿದರು.

Gold seized from the accused

ಉಳಿದ ಆರೋಪಿಗಳ ಪತ್ತೆ ಕಾರ್ಯಾಚರಣೆ: “ಆರೋಪಿಗಳು ಬ್ಯಾಂಕ್​ನ ಕಿಟಕಿ ಕತ್ತರಿಸಿ ಒಳಗೆ ನುಗ್ಗಿ, ಸೇಫ್ ಲಾಕರ್ ರೂಮ್​ನ ಗ್ರಿಲ್ ಮುರಿದು ಕಳ್ಳತನ ಮಾಡಿದ್ದರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ 2 ಕಾರುಗಳು ಹಾಗೂ ಅಂದಾಜು 10 ಕೋಟಿ 75 ಲಕ್ಷ ರೂ. ಮೌಲ್ಯದ 10.5 ಕೆ.ಜಿ ಬಂಗಾರದ ಆಭರಣ ಹಾಗೂ ಆಭರಣ ಕರಗಿಸಿದ ಬಂಗಾರದ ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಗಣೆಗೆ ಸುಲಭವಾಗುತ್ತದೆ ಎಂದು ಕದ್ದ ಚಿನ್ನವನ್ನೆಲ್ಲಾ ಕರಗಿಸಿದ್ದರು. ಇನ್ನುಳಿದ ಆರೋಪಿಗಳು ಹಾಗೂ ಕಳವಾದ ವಸ್ತುಗಳ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಎಸ್​ಪಿ ಮಾಹಿತಿ ನೀಡಿದರು.


Spread the love

About Laxminews 24x7

Check Also

ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ.

Spread the loveದಾವಣಗೆರೆ : ಲೋಕಸಭೆ ಚುನಾವಣೆಯಲ್ಲಿ ಯಾರ ಬಳಿ ಎಷ್ಟು ಕೋಟಿ ರೂಪಾಯಿ ಹಣ ಪಡೆದಿದ್ದೀಯಾ ಎಂಬುದು ಗೊತ್ತಿದೆ. ಭದ್ರಾವತಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ