Breaking News

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the love

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

ನಂದಿಹಳ್ಳಿ ಗ್ರಾಮ ವ್ಯಾಪ್ತಿ ವಾಕಡೆವಾಡಿ ರಸ್ತೆಯಲ್ಲಿರುವ ರವಿ ತೋಪಕರ ಎಂಬುವವರ ಜಮೀನಿನಲ್ಲಿ ಕೆಲವರು ಇಸ್ಪೀಟ್ ಎಲೆಗಳ ಮೇಲೆ ಹಣ ಕಟ್ಟಿ ಅಂದರ್-
ಬಾಹರ್ ಜೂಜಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಠಾಣೆಯ ಪಿಎಸ್ ಐ ಸಂತೋಷ ದಳವಾಯಿ ನೇತೃತ್ವದ ತಂಡ ದಾಳಿ ನಡೆಸಿದ್ದು, 12 ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಗೋವಿಂದ ಪರಶುರಾಮ ಚೌಗುಲೆ, ಸೂರಜ ಮಸನು ತೋಪಕರ, ಮಾರುತಿ ಪಾಂಡು ಸುತಾರ, ಭರತ್ ಸುಧಾಕರ ಪಾಟೀಲ, ಶಿವಾಜಿ ಪಾಂಡು ಸುತಾರ, ಸಂತೋಷ ಅಶೋಕ ಸುತಾರ, ಯಲ್ಲಪ್ಪಾ ಪರಶುರಾಮ ರಾಘೋಜಿ, ಜ್ಯೋತಿಬಾ ಮೋನಪ್ಪಾ ತೋಪಕರ, ಸಾತೇರಿ ಪರಶುರಾಮ ಸುತಾರ, ಕಿರಣ ಲಕ್ಷ್ಮಣ ತಳವಾರ, ಪರಶುರಾಮ ಪಾಂಡು ಸುತಾರ, ಕಲ್ಲಪ್ಪಾ ನಾಗೇಂದ್ರ ತೋಪಕರ ಎಂದು ಗುರುತಿಸಲಾಗಿದೆ.ಬಂಧಿತರಿಂದ ಒಟ್ಟು 15,090 ರೂ. ಹಣ, ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ