ಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ.
ಕೃಷ್ಣ ಜೆ ರಾವ್ ಎನ್ನುವಾತ ಮದುವೆಯಾಗುವುದಾಗಿ ಯುವತಿಗೆ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಯುವತಿ ಗರ್ಭಿಣಿಯಾಗಿರುವುದು ಗೊತ್ತಾಗುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ.
ಈ ಸಂಬಂಧ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ ಕೃಷ್ಣ ನಾಪತ್ತೆಯಾಗಿದ್ದು, ಇದೀಗ ಗರ್ಭಿಣಿ ಯುವತಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಮಗು ಜನನವಾದ ಹಿನ್ನೆಲೆಯಲ್ಲಿ ತನಿಖೆ ಹೊಸ ದಾರಿ ಹಿಡಿದಿದ್ದು, ಮಗುವಿನ ಡಿಎನ್ ಎ ಪರೀಕ್ಷೆ ಮೂಲಕ ಪ್ರಕರಣ ಭೇದಿಸಲು ಪೊಲೀಸರು ಮುಂದಾಗಿದ್ದಾರೆ.ನಾಪತ್ತೆಯಾದ ಆರೋಪಿ ಕೃಷ್ಣನ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿರುವ ನಡುವೆ ಪ್ರಕರಣದ ರಹಸ್ಯ ಬಯಲಿಗೆಳೆಯಲು ಪೊಲೀಸರು, ಯುವತಿ ಜನ್ಮಕೊಟ್ಟ ಮಗುವಿನ ಡಿಎನ್ ಎ ಪರೀಕ್ಷೆಯ ಮೊರೆ ಹೋಗಿದ್ದಾರೆ.
ಈ ಪರೀಕ್ಷೆಯಿಂದ ಯುವತಿ ಗರ್ಭಿಣಿಯಾಗಲು ಕಾರಣ ಯಾರು? ನಿಜವಾಗಿಯೂ ಶ್ರೀಕೃಷ್ಣನೇ ಯುವತಿಗೆ ಮದ್ವೆ ಆಸೆ ತೋರಿಸಿ ಲೈಂಗಿಕವಾಗಿ ಬಳಿಸಿಕೊಂಡಿದ್ನಾ ಎನ್ನುವುದು ಸ್ಪಷ್ಟವಾಗಿ ತಿಳಿಯಲಿದೆ. ಇದರಿಂದ ಪೊಲೀಸರು ಮಗುವಿನ ಡಿಎನ್ ಎ ಪರೀಕ್ಷೆ ಮಾಡಿಸುವ ಮೂಲಕ ಪ್ರಕರಣಕ್ಕೆ ತೆರೆ ಎಳೆಯಲು ಪ್ಲ್ಯಾನ್ ಮಾಡಿದ್ದಾರೆ.
Laxmi News 24×7