Breaking News

ಕೆ.ಎಸ್.ಆರ್.ಟಿ.ಸಿ ವಿಭಾಗಮಟ್ಟದ ಕುಂದು ಕೊರತೆ ಸಭೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ

Spread the love

ಕೆ.ಎಸ್.ಆರ್.ಟಿ.ಸಿ ವಿಭಾಗಮಟ್ಟದ ಕುಂದು ಕೊರತೆ ಸಭೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ ನಗರದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ Satish Jarkiholi ಅವರ ಅಧ್ಯಕ್ಷತೆಯಲ್ಲಿ ಇಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಘಟಕಗಳು ಮತ್ತು ವಿಭಾಗಗಳ ಕುಂದು ಕೊರತೆ ಪರಿಶೀಲನಾ ಸಭೆಯಲ್ಲಿ ಭಾಗಿಯಾದೆ.

ಈ ವೇಳೆ ನೂತನ ಬಸ್ ಘಟಕ/ನಿಲ್ದಾಣಗಳ ಬೇಡಿಕೆ, ನೆಲಸಮಗೊಳಿಸಬೇಕಾದ ಶಿಥಿಲಾವಸ್ಥೆಯಲ್ಲಿರುವ ಬಸ್ ಘಟಕಗಳನ್ನು ಮರು ನಿರ್ಮಿಸುವುದು, ಹೊಸ ಬಸ್ ಗಳ ಬೇಡಿಕೆ ಹಾಗೂ ಹೊಸ ಮಾರ್ಗಗಳ ಬೇಡಿಕೆ ಹಾಗೂ ನೌಕರರ ಸಮಸ್ಯೆಗಳು ಹಾಗೂ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಕೆಲವು ಮಹತ್ವದ ಸೂಚನೆಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ನಿಗಮದ ಅಧ್ಯಕ್ಷ ಶ್ರೀ ರಾಜು ಕಾಗೆ, ಹುಬ್ಬಳ್ಳಿ ಸಂಸ್ಥೆಯ ಎಂಡಿ ಶ್ರೀಮತಿ ಪ್ರಿಯಾಂಕಾ ಎಮ್. ಶ್ರೀ ಪೀರಸಾಬ ಕೈತಾಳ, ಶಾಸಕರಾದ ಶ್ರೀ ರಾಜು ಸೇಠ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ‌ಉಪಸ್ಥಿತರಿದ್ದರು.
#satishjarkiholi #Belagavi


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ