Breaking News

ಹೃದಯಾಘಾತದಿಂದ ಸಾವನ್ನಪ್ಪಿದ ಡಾ.ಸಂದೀಪ್ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ

Spread the love

ಶಿವಮೊಗ್ಗ/ತುಮಕೂರು: ಕಳೆದ ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ 19 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಈಗ ಶಿವಮೊಗ್ಗದಲ್ಲಿ ಸರ್ಕಾರಿ ವೈದ್ಯ ಹಾಗೂ ತುಮಕೂರಿನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿವಮೊಗ್ಗದ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಿರಿಯ ವೈದ್ಯಾಧಿಕಾರಿಯಾಗಿದ್ದ ಡಾ.ಸಂದೀಪ್ ಅವರು ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದರು.

ಶುಕ್ರವಾರ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ ನಂತರ ಇವರಿಗೆ ರಾತ್ರಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಹೊರವಲಯದ ನಾರಾಯಣ ಹೃದಯಾಲಯದಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇವರಿಗೆ ಪತ್ನಿ‌ ಹಾಗೂ ಇಬ್ಬರು ಮಕ್ಕಳಿದ್ದಾರೆ. ಡಾ.ಸಂದೀಪ್ ಚಿತ್ರದುರ್ಗ ಜಿಲ್ಲೆ‌ಯ ಚಿಕ್ಕಜಾಜೂರು ಮೂಲದವರು. ಶಿವಮೊಗ್ಗ ಹೊರವಲಯ ಪುರಲೆಯಲ್ಲಿ‌ ಮನೆ ಮಾಡಿಕೊಂಡಿದ್ದರು.

ಡಾ.ಸಂದೀಪ್ ಕಳೆದ 8 ವರ್ಷಗಳಿಂದ ಇಲ್ಲಿ ಸೇವೆ ಸಲ್ಲಿಸುತ್ತಿದ್ದು, ಜನಾನುರಾಗಿಯಾಗಿದ್ದರು. ಆಸ್ಪತ್ರೆ ಸಿಬ್ಬಂದಿ‌ ಕಂಬನಿ ಮಿಡಿದಿದ್ದಾರೆ.

ಹೃದಯಾಘಾತಕ್ಕೆ ಗ್ರಾ.ಪಂ ಅಧ್ಯಕ್ಷ ಸಾವು: ತುಮಕೂರು ಗ್ರಾಮಾಂತರ ಕ್ಷೇತ್ರದ ಊರುಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ (36) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಇವರು ಬಿಜೆಪಿ ಯುವಮೋರ್ಚಾ ಮುಖಂಡರೂ ಆಗಿದ್ದರು. ತುಮಕೂರು ನಗರದಲ್ಲಿರುವ ಕೋತಿ ತೋಪಿನಲ್ಲಿರುವ‌ ಶಾಲೆಗೆ ಮಗಳನ್ನು ಬಿಟ್ಟು ಆಗಷ್ಟೇ ಮನೆಗೆ ಬಂದಿದ್ದರು. ಮನೆಯಲ್ಲಿ ತಲೆ‌ಸುತ್ತಿ ಬಿದ್ದಿದ್ದಾರೆ. ತಕ್ಷಣ ಸಿದ್ಧಗಂಗಾ‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ