Breaking News

ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗಲೇ ಚಿಗರಿ ಬಸ್ಸನ ಎಕ್ಸೆಲ್ ಕಟ್,

Spread the love

ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗಲೇ ಚಿಗರಿ ಬಸ್ಸನ ಎಕ್ಸೆಲ್ ಕಟ್, ತಪ್ಪಿದ ಅನಾಹುತ…. ಹೆಚ್‌ಡಿಬಿಆರ್‌ಟಿಎಸ್ ಡಿವೈಡರ್ ಗ್ರೀಲ್‌ಗೆ ಬಸ್ಸ ಡಿಕ್ಕಿ, ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ.
ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗಲೇ ಚಿಗರಿ ಬಸ್ಸನ ಎಕ್ಸೆಲ್ ಕಟ್ಟಾಗಿದ ಪರಿಣಾಮ ಚಿಗರಿ ಬಸ್ಸ ಅಪಘಾತವಾಗಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಧಾರವಾಡದ ಟೋಲನಾಕಾ ಬಳಿ‌ ಇಂದು ನಡೆದಿದೆ.
ಧಾರವಾಡದಿಂದ ಹೆಚ್ ಡಿ ಬಿ ಆರ್ ಟಿಎಸ್ ಮಾರ್ಗವಾಗಿ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಧಾರವಾಡದ ಟೋಲ‌ನಾಕಾ ಬಳಿ ಈ ದುರ್ಘಟನೆ ನಡೆದಿದ್ದು, ಬಾರಿ ಅನಾಹುತವೊಂದು ತಪ್ಪಿದಂತಾಗಿದೆ. ಬಸ್ಸನ ಎಕ್ಸೆಲ್ ಕಟ್ಟಾಗಿದ್ದರಿಂದ ಚಿಗರಿ ಬಸ್ಸ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದಾಗಿ ರಸ್ತೆ ಡಿವೈಡರ್‌ಗೆ ಬಸ್ಸ ಡಿಕ್ಕಿಯಾಗಿದೆ.
ಬಸ್ಸ ಹೀಗೆ ಅಘಾತಕ್ಕೆ ಒಳಗಾದ ಹಿನ್ನೆಲೆಯಲ್ಲಿ ಬಸ್ಸನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಇನ್ನೂ ಘಟನಾ ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ‌ಭೇಟಿ ನೀಡಿ ಪರಿಶೀಲನೆ ಕೈಗೊಂಡು ಕಾನೂನು ಕ್ರಮ ಜರುಗಿಸಿದ್ದಾರೆ.

Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ