Breaking News
Home / ಹುಬ್ಬಳ್ಳಿ / ಮನೆಯವರು ಮದುವೆಗೆ ತೆರಳಿ ವಾಪಸ ಬರೋದರೊಳಗೆ ಅಪಾರ ಪ್ರಮಾಣದ ಚಿನ್ನಾಭರಣ. ನಗದು ರೇಷ್ಮೆ ಸೀರೆಗಳು ಕಳ್ಳತನ

ಮನೆಯವರು ಮದುವೆಗೆ ತೆರಳಿ ವಾಪಸ ಬರೋದರೊಳಗೆ ಅಪಾರ ಪ್ರಮಾಣದ ಚಿನ್ನಾಭರಣ. ನಗದು ರೇಷ್ಮೆ ಸೀರೆಗಳು ಕಳ್ಳತನ

Spread the love

ಹುಬ್ಬಳ್ಳಿ: ಮನೆಯವರು ಮದುವೆಗೆ ತೆರಳಿ ವಾಪಸ ಬರೋದರೊಳಗೆ ಅಪಾರ ಪ್ರಮಾಣದ ಚಿನ್ನಾಭರಣ. ನಗದು ರೇಷ್ಮೆ ಸೀರೆಗಳು ಕಳ್ಳತನವಾದ ಘಟನೆ ಹುಬ್ಬಳ್ಳಿಯ ಆದರ್ಶನಗರದಲ್ಲಿ ನಡೆದಿದೆ.

ನೀರಾವರಿ ಇಲಾಖೆಯ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ಮಹಾದೇವಪ್ಪ ಭೀಮಕ್ಕನವರ ಎಂಬವರ ಮನೆಯಲ್ಲೇ ಕಳ್ಳತನ ನಡೆದಿದೆ. 380 ಗ್ರಾಂ ಚಿನ್ನ, 15 ಕೆಜಿ ಬೆಳ್ಳಿ, 10ಬೆಲೆಬಾಳುವ ರೇಷ್ಮೆ ಸೀರೆ, ಸಾವಿರಾರೂ ರೂಪಾಯಿ ನಗದನ್ನ ದೋಚಿಕೊಂಡು ಪರಾರಿಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಘಟನೆ ನಡೆದಿದ್ದು, ಮದುವೆಗಾಗಿ ಮನೆಯವರು ತೆರಳಿ ಮರಳಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಅಶೋಕ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಸ್ವತಃ ಪೊಲೀಸ್ ಕಮೀಷನರ ಲಾಬುರಾಮ್ ಕಳ್ಳತನವಾದ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಪಾಸಣೆ ನಡೆಸಿದ ನಂತರ ಮಾತನಾಡಿದ ಕಮೀಷನರ್ ಲಾಬುರಾಮ್, ತಕ್ಷಣವೇ ಸಾಕ್ಷಿಗಳಿಗಾಗಿ ಹುಡುಕಾಟ ನಡೆಸಿದ್ದು, ವಿಚಾರಣೆ ನಡೆಸುತ್ತಿದ್ದೇವೆ. ಈ ಕುರಿತು ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.


Spread the love

About Laxminews 24x7

Check Also

ಧರ್ಮ ಯುದ್ಧದಲ್ಲಿ ನಮ್ಮ ಗೆಲುವು ಕಟ್ಟಿಟ್ಟ ಬುತ್ತಿ ಎಂದ ದಿಂಗಾಲೇಶ್ವರ ಶ್ರೀಗಳು,ಜೋಶಿಗೆ ಸೋಲಿನ ಭಯ

Spread the love ಹುಬ್ಬಳ್ಳಿ: ಧರ್ಮ ಯುದ್ಧದಲ್ಲಿ ನಮ್ಮ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಫಕೀರೇಶ್ವರ ಮಠದ ದಿಂಗಾಲೇಶ್ವರ ಶ್ರೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ