Breaking News
Home / ರಾಜ್ಯ / ಕೊರೊನಾದಿಂದ ಕಳಸ ಪಟ್ಟಣದ ಬ್ಯಾಂಕ್‍ವೊಂದು ಸೀಲ್‍ಡೌನ್

ಕೊರೊನಾದಿಂದ ಕಳಸ ಪಟ್ಟಣದ ಬ್ಯಾಂಕ್‍ವೊಂದು ಸೀಲ್‍ಡೌನ್

Spread the love

ಚಿಕ್ಕಮಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ ಆಗ್ತಿದೆ. ಇನ್ನೇನು ನಾಳೆ-ನಾಡಿದ್ದು ಅನ್ನುವಷ್ಟರಲ್ಲಿ ಲಸಿಕೆಯೂ ಸಿಗುತ್ತೆ, ಅಬ್ಬಾ… ಈ ಹೆಮ್ಮಾರಿ ತೊಲಗಿತು ಎಂದು ಜನಸಾಮಾನ್ಯರು ನಿಟ್ಟುಸಿರು ಬಿಡುವ ಹೊತ್ತಿಗೆ ಮತ್ತೆ ಕೊರೊನಾದಿಂದ ಕಳಸ ಪಟ್ಟಣದ ಬ್ಯಾಂಕ್‍ವೊಂದು ಸೀಲ್‍ಡೌನ್

ಶುಕ್ರವಾರ, ಶನಿವಾರ ಹಾಗೂ ಇಂದು ಭಾನುವಾರವಾದ್ದರಿಂದ ಜನರಿಗೆ ಬ್ಯಾಂಕ್ ಇಲ್ಲದೆ ತೀವ್ರ ಸಮಸ್ಯೆ ಎದುರಾಗಿತ್ತು. ಕಳಸ ಪಟ್ಟಣ ಸುತ್ತಮುತ್ತ ಅಡಿಕೆ, ಕಾಫಿ ತೋಟವೇ ಹೆಚ್ಚಿದ್ದು, ಈ ಭಾಗದಲ್ಲಿ ಕೂಲಿ ಕಾರ್ಮಿಕರ ಸಂಖ್ಯೆಯೂ ಹೆಚಾಗಿದೆ. ಗ್ರಾಮೀಣ ಭಾಗವಾದ್ದರಿಂದ ಬಹುತೇಕ ಕೂಲಿ ಕಾರ್ಮಿಕರು ಕರ್ನಾಟಕ ಬ್ಯಾಂಕಲ್ಲಿ ಅಕೌಂಟ್ ಮಾಡಿಸಿದ್ದು ಕಳೆದ ಮೂರು ದಿನಗಳಿಂದ ಹಣ ಬಿಡಿಸಲಾಗದೇ ಒದ್ದಾಡಿದ್ದಾರೆ.
ಕೆಲವರು ಕೂಲಿ ಕಾರ್ಮಿಕರು ಮಾಡಿದ ಕೆಲಸಕ್ಕೆ ಕೂಲಿ ನೀಡಲು ಹಣ ಬಿಡಿಸಲಾಗದಂತಹಾ ಸ್ಥಿತಿ ನಿರ್ಮಾಣವಾಗಿದೆ. ಬ್ಯಾಂಕ್ ಸೀಲ್‍ಡೌನ್‍ನಿಂದ ಪಟ್ಟಣ ಹಾಗೂ ಗ್ರಾಮೀಣ ಭಾಗದ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸಿದ್ದಾರೆ. ಈ ಬ್ಯಾಂಕಿನಲ್ಲಿ ಏಳು ಜನ ಕೆಲಸ ಮಾಡುತ್ತಿದ್ದು, ಐದು  ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ