ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ
ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ
ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ
ಶಾಸಕ ರಾಜು ಶೆಠ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ
ಬೆಳಗಾವಿ ನಗರದಲ್ಲಿ ಮುಂಬರುವ ದಿನಗಳಲ್ಲಿ ಆರಂಭವಾಗುವ ಫ್ಲೈಓವರ್ ಕಾಮಗಾರಿಯಿಂದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಂಡು ಆದಷ್ಟು ಬೇಗನೆ ಕಾಮಗಾರಿಯನ್ನು ಮುಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಬೆಳಗಾವಿ ಉತ್ತರದ ಶಾಸಕ ಆಸಿಫ್ (ರಾಜು) ಶೆಠ ಸೂಚಿಸಿದರು.
ಅವರು ಫ್ಲೈಓವರ್ ಯೋಜನೆಯಿಂದ ಪ್ರಭಾವಿತವಾಗಿರುವ ಲೇಕ್ ವ್ಯೂ ಆಸ್ಪತ್ರೆ ಜಂಕ್ಷನ್, ಅಶೋಕ ವೃತ್ತ ಮತ್ತು ರಾಣಿ ಚೆನ್ನಮ್ಮ ವೃತ್ತ ಸೇರಿದಂತೆ ಪ್ರಮುಖ ಪ್ರದೇಶಗಳನ್ನು ಪರಿಶೀಲಿಸಿ ಈ ಪ್ರದೇಶಗಳಲ್ಲಿ ನಡೆಯುತ್ತಿರುವ ಪೂರ್ವಭಾವಿ ತಯಾರಿಗಳನ್ನು ಅವಲೋಕಿಸಿದರು.
ಸಾರ್ವಜನಿಕರಿಗೆ ಆಗಬಹುದಾದ ಅನಾನುಕೂಲತೆಗಳನ್ನು ತಪ್ಪಿಸಲು ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸಂಚಾರ ಪ್ರಭಾವಿತ ಪ್ರದೇಶಗಳನ್ನು ಪರಿಶೀಲಿಸಿ, ವಾಹನಗಳ ಸರಾಗ ಸಂಚಾರ ಮತ್ತು ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಯೋಜನೆ ರೂಪಿಸುವಂತೆ ಸೂಚನೆ ನೀಡಿದರು.
ಸಂಚಾರ ಮತ್ತು ಇಂಜಿನಿಯರಿಂಗ್ ಇಲಾಖೆಗಳಿಂದ ಅಧಿಕಾರಿಗಳು ಶಾಸಕರಿಗೆ ಡೈವರ್ಜಿನ್ಗಳು, ಭದ್ರತಾ ಕ್ರಮಗಳು ಮತ್ತು ಸಾರ್ವಜನಿಕರೊಂದಿಗೆ ಸಂವಹನಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು. ಅವರು ಅಧಿಕಾರಿಗಳಿಗೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗಗಳು ಹಾಗೂ ಗೊಂದಲವಾಗದಂತೆ ಸ್ಪಷ್ಟವಾಗಿ ಸೂಚನಾ ಫಲಕಗಳ ಅಳವಡಿಕೆಗೆ ಆದ್ಯತೆ ನೀಡುವಂತೆ ನಿರ್ದೇಶನ ನೀಡಿದರು.
ಶಾಸಕರೊಂದಿಗೆ ಮುಖ್ಯ ಇಂಜಿನಿಯರ್ಗಳು, ಪೋಲಿಸ್ ಇಲಾಖೆಯ ಅಧಿಕಾರಿಗಳು ಮತ್ತು ಸ್ಥಳೀಯ ಅಧಿಕಾರಿಗಳು ಇದ್ದರು.
Laxmi News 24×7