Breaking News

ವಿಗ್ರಹ ಕಿತ್ತು ಹಾಕಿದ ಪ್ರಕರಣದಲ್ಲಿ ಇಬ್ಬರ ಬಂಧನ

Spread the love

ಶಿವಮೊಗ್ಗ: “ಹೊರವಲಯ ರಾಗಿಗುಡ್ಡದ ಬಂಗಾರಪ್ಪ ಕಾಲೊನಿಯಲ್ಲಿ ಶನಿವಾರ ನಡೆದ ವಿಗ್ರಹ ಕಿತ್ತು ದ್ವಂಸಕ್ಕೆ ಯತ್ನದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಯಾರೇ ಆದರೂ ಕಾನೂನಿನ ವಿರುದ್ದ ಕ್ರಮ ತೆಗೆದುಕೊಂಡರೆ ಸೂಕ್ತ ಕ್ರಮ ಜರುಗಿಸಲಾಗುವುದು” ಎಂದು ಎಸ್​ಪಿ ಮಿಥುನ್ ಕುಮಾರ್ ಎಚ್ಚರಿಸಿದ್ದಾರೆ.

ಅಲ್ಲದೆ ದಲಿತ ದೌರ್ಜನ್ಯದ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.‌ ಸೈಯದ್ ಹಾಗೂ ನಿಯಾಮತ್ ಎಂಬುವರನ್ನು ಬಂಧಿಸಲಾಗಿದೆ.‌ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ‌ ಒಳಪಡಿಸಲಾಗಿದೆ.‌ ಘಟನೆ ಯಾಕೆ ನಡೆದಿದೆ ಎಂದು ತನಿಖೆ ನಡೆಸಲಾಗುತ್ತಿದೆ. ಅಕ್ರಮ ಕಟ್ಟಡ ನಿರ್ಮಾಣ ಮಾಡುತ್ತಿರುವವನ ಪಾತ್ರದ ಕುರಿತು ಡಿವೈಎಸ್ಪಿ, ಅಧಿಕಾರಿಗಳು ತಂಡದೊಂದಿಗೆ ತನಿಖೆ ನಡೆಸುತ್ತಿದ್ದಾರೆ. ಇದು ನಿರ್ಮಾಣ ಹಂತದಲ್ಲಿರುವ ಮನೆಯಾಗಿದ್ದು, ಇಲ್ಲಿ ಯಾರ್ಯಾರೋ ಬಂದು ಹೋಗುತ್ತಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟದ ಬಗ್ಗೆ ಸೂಕ್ತ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ.

ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಯಾರು ಸಹ ಸುಳ್ಳು ಸುದ್ದಿ ಹಬ್ಬಿಸಬಾರದು. ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಇದೇ ವೇಳೆ ಎಚ್ಚರಿಕೆ ರವಾನಿಸಿದ್ದಾರೆ.

ಅಕ್ರಮ ಕಟ್ಟಡ ಕೆಡವಲು ಮನವಿ: ಪ್ರಕರಣ ನಡೆದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಅದನ್ನು ಕೆಡವಬೇಕು ಎಂದು ಶಾಸಕ ಚನ್ನಬಸಪ್ಪ‌ ಅವರ ನೇತೃತ್ವದಲ್ಲಿ ಶಿವಮೊಗ್ಗ ನಗರ ಬಿಜೆಪಿ ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ಮನವಿ‌ ಸಲ್ಲಿಸಿದೆ.ಶಾಸಕ ಚನ್ನಬಸಪ್ಪ‌ ಅವರು ಮಾತನಾಡಿ, ” ದುಷ್ಕೃತ್ಯ ಮಾಡಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದೇವೆ. ಆ ಜಾಗದಲ್ಲಿ ಅಕ್ರಮ ಕಟ್ಟಡ ಕಟ್ಟಿದ್ದು, ತಮ್ಮ ಮನೆ ಬಾಗಿಲು ಮುಂದೆ ವಿಗ್ರಹಗಳು ಇರಬಾರದು ಎಂದು ಕಿತ್ತು ಚರಂಡಿಗೆ ಹಾಕಿರುವುದು ಅಕ್ಷಮಯ ಅಪರಾಧ. ಕಟ್ಟಡ ಅಕ್ರಮವಾಗಿರುವುದರಿಂದ ಅದನ್ನು ಕೆಡವುವಂತೆ ನಾವು ಪಾಲಿಕೆ ಆಯುಕ್ತರಿಗೆ ಮನವಿ ಮಾಡಿದ್ದೇವೆ” ಎಂದು ತಿಳಿಸಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ