Breaking News
Home / Uncategorized / ವಿಧಾನಪರಿಷತ್​ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ತಮ್ಮ ಸರ್ಕಾರಿ ಬಂಗಲೆ ಮತ್ತು ಕಾರನ್ನು ವಾಪಸ್​ ಮಾಡಿದ್ದಾರೆ.

ವಿಧಾನಪರಿಷತ್​ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ತಮ್ಮ ಸರ್ಕಾರಿ ಬಂಗಲೆ ಮತ್ತು ಕಾರನ್ನು ವಾಪಸ್​ ಮಾಡಿದ್ದಾರೆ.

Spread the love

ಬೆಂಗಳೂರು (ಡಿ. 21): ವಿಧಾನ ಪರಿಷತ್​ನಲ್ಲಿ ಕಳೆದ ವಾರ ನಡೆದ ಕೋಲಾಹಲ ಬೆನ್ನಲ್ಲೇ ಇದೀಗ ವಿಧಾನಪರಿಷತ್​ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ತಮ್ಮ ಸರ್ಕಾರಿ ಬಂಗಲೆ ಮತ್ತು ಕಾರನ್ನು ವಾಪಸ್​ ಮಾಡಿದ್ದಾರೆ. ಸರ್ಕಾರಿ ಮನೆ ತೊರೆದಿರುವ ಅವರು ತಮ್ಮ ಸ್ವ ಕ್ಷೇತ್ರಕ್ಕೆ ತೆರಳಿದ್ದಾರೆ. ಅಲ್ಲದೇ ತಮ್ಮ ಮನೆಯ ಪೀಠೋಪಕರಣಗಳನ್ನು ತೆಗೆದುಕೊಂಡು ಹೋಗುವಂತೆ ಸಭಾಪತಿಯವರೇ ಲೋಕೋಪಯೋಗಿ ಇಲಾಖೆಗೆ ಕರೆ ಮಾಡಿ ಸೂಚನೆ ನೀಡಿದ್ದಾರೆ. ಪರಿಷತ್ ಸಭಾಪತಿ​ ಸ್ಥಾನಕ್ಕೆ ರಾಜೀನಾಮೆಯನ್ನು ನೀಡದ ಪ್ರತಾಪ್​ ಚಂದ್ರ ಶೆಟ್ಟಿ, ಸರ್ಕಾರಿ ಬಂಗಲೆ ತೊರೆದಿದ್ದಾರೆ. ಇನ್ನು ಘಟನೆ ಬೆನ್ನಲ್ಲೇ ಅವರು ರಾಜೀನಾಮೆ ನೀಡಲು ಮುಂದಾಗಿದ್ದರೂ ಕಾಂಗ್ರೆಸ್​ ಅವರನ್ನು ತಡೆದಿತ್ತು. ಪರಿಷತ್​ನಲ್ಲಿ ಆದ ಗಲಾಟೆ ಬಳಿಕವೂ ಹುದ್ದೆಯಲ್ಲಿ ಮುಂದುವರೆದರೆ ಅಧಿಕಾರಕ್ಕಾಗಿ ತಾವು ಇನ್ನು ಹುದ್ದೆಯಲ್ಲಿದ್ದೇವೆ ಎಂಬ ಸಂದೇಶ ರವಾನೆಯಾಗುತ್ತದೆ. ಈ ಹಿನ್ನಲೆ ರಾಜೀನಾಮೆ ನೀಡುತ್ತೇವೆ ಎಂದು ಪ್ರತಾಪ್​ ಚಂದ್ರ ಶೆಟ್ಟಿ ತಿಳಿಸಿದ್ದರು. ಆದರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇದಕ್ಕೆ ತಡೆಯಾಗಿದ್ದಾರೆ. ಅಲ್ಲದೇ ಅವಿಶ್ವಾಸ ಸೂಚನೆ ಚರ್ಚೆಯಾಗಿ ಮತದಾನದ ಕ್ಷಣದವರೆಗೂ ರಾಜೀನಾಮೆ ಪ್ರಸ್ತಾಪ ಮಾಡದಂತೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆ ಪ್ರತಾಪ ಚಂದ್ರ ಶೆಟ್ಟಿ ಇನ್ನು ರಾಜೀನಾಮೆ ಬಗ್ಗೆ ನಿರ್ಧರಿಸಿಲ್ಲ ಎನ್ನಲಾಗಿದೆ. ಆದರೆ, ಬಿಜೆಪಿ ನಾಯಕರು ಸಭಾಪತಿಯವರಿಗೆ ಸಂಖ್ಯಾಬಲ ಇಲ್ಲ ಎಂಬುದು ಈಗಾಗಲೇ ಸ್ಪಷ್ಟವಾಗಿದೆ. ಜೆಡಿಎಸ್​ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್​ ಬೆಂಬಲ ನೀಡುವುದಾಗಿ ತಿಳಿಸಿದೆ. ಈ ಹಿನ್ನಲೆ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ. ವಿಧಾನಪರಿಷತ್​ನಲ್ಲಿ ನಡೆದ ಘಟನೆ ಕುರಿತು ಡಿ. 15ರೊಳಗೆ ಪರಿಷತ್​ ಕಾರ್ಯದರ್ಶಿಗೆ ವಿವರಗಳನ್ನು ನೀಡುವಂತೆ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿಗೆ ನೋಟಿಸ್​ ಜಾರಿಗೊಳಿಸಿದ್ದಾರೆ.


Spread the love

About Laxminews 24x7

Check Also

ಅಶ್ಲೀಲ ವಿಡಿಯೋ ಪ್ರಕರಣ: ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ನಿರ್ಧಾರ

Spread the loveಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವಿದೇಶಕ್ಕೆ ತೆರಳಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ