Breaking News
Home / ಜಿಲ್ಲೆ / ಗದಗ / ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ- ರಕ್ತಸಿಕ್ತವಾದ ರಸ್ತೆ

ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ- ರಕ್ತಸಿಕ್ತವಾದ ರಸ್ತೆ

Spread the love

ಗದಗ: ಹಳೆ ವೈಷಮ್ಯದ ಹಿನ್ನೆಲೆ ಎರಡು ಕುಟುಂಬಗಳು ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡಿರುವ ಘಟನೆ ಗದಗದ ಬೆಟಗೇರಿ ಸೆಟಲ್ಮೆಂಟ್‍ನಲ್ಲಿ ನಡೆದಿದೆ.

ನಡು ರಸ್ತೆಯಲ್ಲೆ ಲಾಂಗು, ಮಚ್ಚುಗಳು ಝಳಪಿದ ಹಿನ್ನೆಲೆ ರಸ್ತೆ ಅನೇಕ ಕಡೆಗೆ ರಕ್ತಸಿಕ್ತವಾಗಿದೆ. ಬುಲೆಟ್ ಬೈಕ್, ಕಾರ್, ಮನೆಯ ಕಿಟಕಿ, ಬಾಗಿಲು ಸಂಪೂರ್ಣ ಜಖಂ ಆಗಿವೆ. ಘಟನೆಯಿಂದ ಯೇಸುಕುಮಾರ ಹೊಸಮನಿ (34), ಅನಿಲ ಮುತಗಾರ (35), ಗೋವಿಂದ ಮುತಗಾರ (43) ಮತ್ತು ಶಾಕಮ್ಮ (37)ಗೆ ಗಂಭೀರವಾಗಿ ಗಾಯಗಳಾಗಿವೆ.

ಗಾಯಾಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಜುನಾಥ ಜಾವಾವ್, ವಿಕಾಸ್ ಜಾದಾವ ಎಂಬವರು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಕೆ. ಪ್ರಹ್ಲಾದ್, ಸಿಪಿಐ ಕಿರಣ್ ಕುಮಾರ್ ಕಾಂಬಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಗದಗನ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಲೈಂಗಿಕ ಕಿರುಕುಳ ; ಕ್ಷೇತ್ರ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು, ದಂಡ ವಿಧಿಸಿದ ಕೋರ್ಟ್.!

Spread the loveಗದಗ : ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕೇಸ್ ಗೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ