Breaking News

ತಮ್ಮ ವಿರುದ್ಧದ ಪ್ರಕರಣ ಕೈ ಬಿಟ್ಟ ಖುಷಿಯಲ್ಲಿದ್ದ ರಾಜಕಾರಣಿಗಳಿಗೆ ಹೈಕೋರ್ಟ್ ಶಾಕ್

Spread the love

ಬೆಂಗಳೂರು: ತಮ್ಮ ವಿರುದ್ಧದ ಪ್ರಕರಣ ಕೈ ಬಿಟ್ಟ ಖುಷಿಯಲ್ಲಿದ್ದ ರಾಜಕಾರಣಿಗಳಿಗೆ ಶಾಕ್ ಹೈಕೋರ್ಟ್​​ ಶಾಕ್ ನೀಡಿದ್ದು, ಸರ್ಕಾರದ ಆದೇಶ ಅನುಷ್ಟಾನಗೊಳಿಸದಂತೆ ಹೈಕೋರ್ಟ್ ನಿರ್ಬಂಧ ಹೇರಿದೆ.

ಆಗಸ್ಟ್ 31 ರಂದು ಶಾಸಕರು, ಸಂಸದರ ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧದ 62 ಪ್ರಕರಣಗಳನ್ನು ಕೈಬಿಟ್ಟ ಹಿನ್ನೆಲೆಯಲ್ಲಿ ಪೀಪಲ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಂಸ್ಥೆಯೂ ಹೈಕೋರ್ಟ್​ನಲ್ಲಿ ಸಾರ್ವಜನಿಕರ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆ ಮಾಡಿತ್ತು. ಅರ್ಜಿಯಲ್ಲಿ ಸರ್ಕಾರ ನಿಯಮಬಾಹಿರವಾಗಿ, ಅಭಿಯೋಜಕರ ಅಭಿಪ್ರಾಯವಿಲ್ಲದೇ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿತ್ತು.

ಸದ್ಯ ಪಿಐಎಲ್ ಸ್ವೀಕರಿಸುವ ಹೈಕೋರ್ಟ್ ಸರ್ಕಾರದ ಕ್ರಮಕ್ಕೆ ನಿರ್ಬಂಧ ವಿಧಿಸಿ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. ಅಲ್ಲದೇ ರಾಜ್ಯ ಸರ್ಕಾರಕ್ಕೆ 2021ರ ಜನವರಿ 22ರೊಳಗೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿದೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ