Breaking News

ಆಪರೇಟಿವ್ ಸೊಸೈಟಿಯೊಂದರ ಮೇಲೆ ಇಡಿ ದಾಳಿ

Spread the love

ಬೆಂಗಳೂರು: ಅಧಿಕ ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ 15,000ಕ್ಕೂ ಹೆಚ್ಚು ಗ್ರಾಹಕರಿಗೆ 100 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಕೋ-ಆಪರೇಟಿವ್ ಸೊಸೈಟಿಯೊಂದರ ಮೇಲೆ ಜಾರಿ ನಿರ್ದೇಶಾನಾಲಯ ದಾಳಿ ಮಾಡಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ವಿಜಯನಗರ, ಜಾಲಹಳ್ಳಿ, ಆರ್​ಪಿಸಿ ಲೇಔಟ್ ಶಾಖೆಗಳು ಸೇರಿದಂತೆ ಒಟ್ಟು 15 ಕಡೆಗಳಲ್ಲಿ ದಾಳಿ ನಡೆಸಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ಈ ಕೋ-ಆಪರೇಟಿವ್ ಸೊಸೈಟಿ, ವಿಲ್ಸನ್ ಗಾರ್ಡನ್​ನಲ್ಲಿ ಪ್ರಧಾನ ಕಚೇರಿ ಹೊಂದಿದ್ದು ವಂಚನೆಗೆ ಸಂಬಂಧಿಸಿದಂತೆ ಜಾಲಹಳ್ಳಿ, ವಿಲ್ಸನ್ ಗಾರ್ಡನ್, ಯಲಹಂಕ, ಪೀಣ್ಯ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೊಸೈಟಿ ಅಧ್ಯಕ್ಷರು ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿತ್ತು‌. ಬಳಿಕ ಸಿಸಿಬಿಗೆ ವರ್ಗಾವಣೆಗೆ ಆಗುತ್ತಿದ್ದಂತೆ ಪ್ರಕರಂಕ್ಕೆ ಸಂಬಂಧಿಸಿ ಐವರನ್ನು 2022ರಲ್ಲಿ ಬಂಧಿಸಲಾಗಿತ್ತು.

1998ರಲ್ಲಿ ಕೋ ಆಪರೇಟಿವ್ ಬ್ಯಾಂಕ್ ಬೆಂಗಳೂರಿನ ಪೀಣ್ಯಾದಲ್ಲಿ ಶುರುವಾಗಿ ನಂತರ ನಗರದ ಹಲವು ಕಡೆ ಬ್ರಾಂಚ್ ಓಪನ್ ಮಾಡಿತ್ತು. ಹೂಡಿಕೆ ಮಾಡುವ ಹಣಕ್ಕೆ ಇತರ ಬ್ಯಾಂಕ್​ಗಳಿಗಿಂತ ಹೆಚ್ಚಿನ ರಿಟರ್ನ್ಸ್ ಕೊಡುವುದಾಗಿ ಗ್ರಾಹಕರಿಂದ ಹಣ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. ಗ್ರಾಹಕರ ಕೋಟ್ಯಂತರ ರೂಪಾಯಿ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿದ್ದ ಆರೋಪವಿತ್ತು. ಖಾತೆದಾರರು ಹೂಡಿಕೆ ಮಾಡಿದ್ದ ಅಸಲಿ ಹಣ ಹಾಗೂ ಬಡ್ಡಿಯನ್ನು ಕೊಡದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಹಲವೆಡೆ ದಾಖಲಾಗಿದ್ದ ಕೇಸ್​ಗಳು ಸಿಸಿಬಿಗೆ ವರ್ಗಾವಣೆಯಾಗಿತ್ತು. ತನಿಖೆ ನಡೆಸಿ ಐವರನ್ನು ಬಂಧಿಸಿದ್ದ ಸಿಸಿಬಿ, ಪ್ರಕರಣ ಸಂಬಂಧ ಐಟಿ ಹಾಗೂ ಇಡಿಗೆ ಮಾಹಿತಿ ನೀಡಿತ್ತು.

2023ರಲ್ಲಿ ಆರ್​ಬಿಐ ಕೋ-ಆಪರೇಟಿವ್ ಬ್ಯಾಂಕ್ ಲೈಸೆನ್ಸ್ ರದ್ದು ಮಾಡಿತ್ತು


Spread the love

About Laxminews 24x7

Check Also

ಮುಖ್ಯಮಂತ್ರಿ ,ಉಪ ಮುಖ್ಯಮಂತ್ರಿ ಹಾಗೂ ಮಹದೇವಪ್ಪ ರವರ ನೇತೃತ್ವದಲ್ಲಿ ಒಳಮೀಸಲಾತಿ ಅನುಷ್ಠಾನವಾಗಲಿದೆ ವೀನಾ ಕಾರಣ ಗೊಂದಲಕ್ಕೆ ಒಳಗಾಗದಿರಿ ಆಹಾರ ಸಚಿವ:- ಕೆಹೆಚ್. ಮುನಿಯಪ್ಪ

Spread the loveಹಸಿರುಕ್ರಾಂತಿ ಹರಿಕಾರ, ರಾಷ್ಟ್ರ ನಾಯಕ, ಮಾಜಿ ಉಪ ಪ್ರಧಾನಿ ಹಾಗೂ ತಳ ಸಮುದಾಯಗಳ ಆಶಾಕಿರಣ ಡಾ. ಬಾಬು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ