Breaking News

ಇಂದು ಕಾಂಗ್ರೆಸ್​ ಸಾಧನಾ ಸಮಾವೇಶ: ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ

Spread the love

ಮೈಸೂರು: ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿಯೊಂದಿಗೆ ಸಿದ್ಧಗೊಂಡಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸಾಧನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ಇಂದು ನಡೆಯಲಿರುವ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮಹಾರಾಜ ಮೈದಾನದಲ್ಲಿ ಜರ್ಮನ್ ಟೆಂಟ್ ನಲ್ಲಿ ನಿರ್ಮಾಣವಾದ ಬೃಹತ್ ಗಾತ್ರದ ವೇದಿಕೆ ನಿರ್ಮಾಣ ಮಾಡಲಾಗಿದೆ.
ನಾಳೆ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ಮಾಡಲಾಗಿದ್ದು, ಮೈಸೂರಿನ ಈ ಬಾರಿ ವಿಶೇಷವಾಗಿ ವೇದಿಕೆ ಸಜ್ಜಾಗಿದೆ. ವೇದಿಕೆಯ ಮಧ್ಯದಲ್ಲಿ ಸಿಎಂ ಸಿದ್ದರಾಮಯ್ಯ ನಡೆದುಕೊಂಡು ಹೋಗೋದಕ್ಕೆ ಸ್ಪೆಷಲ್ ಟ್ರ‍್ಯಾಕ್ ನಿರ್ಮಿಸಲಾಗಿದ್ದು, ಸುಮಾರು 200 ಮೀಟರ್ ನಡೆದುಕೊಂಡು ಹೋಗಬೇಕಾಗುತ್ತದೆ.

ಇನ್ನು ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಕುರಿತು ಕಲಾಕೃತಿ ತಯಾರಿ ಮಾಡಲಾಗಿದ್ದು, ಕೃಷಿ ಅಧಿಕಾರಿಗಳಿಂದ ಚಿತ್ತಾಕರ್ಷಕ ರಂಗೋಲಿ ಸಿದ್ಧವಾಗುತ್ತಿದೆ. ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಬರುವ ನಿರೀಕ್ಷೆ ಇದೆ. ಸಮಾವೇಶದ ವೇಳೆ ಅವಘಡ ಸಂಭವಿಸದAತೆ ಪೊಲೀಸರು ಫುಲ್ ಹೈ ಅಲರ್ಟ್ ಆಗಿದ್ದಾರೆ. ಬೃಹತ್ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ