Breaking News

ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

Spread the love

ಮಂಗಳೂರು: ಮಂಗಳೂರಿನ ಜೈಲಿನಲ್ಲಿ ವಿಚಾರಣಾಧೀನ ಕೈದಿಯಿಂದ 20 ಸಾವಿರ ರೂ. ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಇತರ ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (KCOCA)ಯ ವಿವಿಧ ಸೆಕ್ಷನ್​ಗಳನ್ನು ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಸುಲಿಗೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಈ ಕಾಯ್ದೆ ಜಾರಿಗೊಳಿಸಲಾಗಿದೆ. ಧನುಷ್ ಭಂಡಾರಿ, ದಿಲೇಶ್ ಬಂಗೇರ, ಲಾಯ್ ವೇಗಾಸ್ ಹಾಗೂ ಸಚಿನ್ ತಲಪಾಡಿ ಎಂಬವರ ವಿರುದ್ದ ಈ ಕ್ರಮ ಕೈಗೊಳ್ಳಲಾಗಿದೆ. ಈ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 308(4) ಮತ್ತು 3(5) ಅಡಿಯಲ್ಲಿ ಜೈಲಿನಲ್ಲಿರುವ ಸಹ ಕೈದಿಯೊಬ್ಬರಿಂದ ಸುಲಿಗೆ ಮಾಡಿದ ಆರೋಪವಿದೆ. ಆರೋಪಿಗಳು ಸಹ ಕೈದಿಯ ಮೇಲೆ ದಾಳಿ ಮಾಡಿ, ಅವನಿಂದ 20,000 ರೂ.ಗಳನ್ನು ಸುಲಿಗೆ ಮಾಡಿದ್ದಾರೆ. ಈ ಹಣವನ್ನು ಆರೋಪಿಗಳು ನೀಡಿದ ಖಾತೆಗೆ ಕೈದಿಯ ಪತ್ನಿಯಿಂದ ಜಮಾ ಮಾಡಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ಕೆಸಿಒಸಿಎ ಕ್ರಮ: ಆರೋಪಿಗಳ ವಿರುದ್ಧ ಈಗಾಗಲೇ ಒಂದಕ್ಕಿಂತ ಹೆಚ್ಚು ಪ್ರಕರಣಗಳು ಕೋರ್ಟ್​ನಲ್ಲಿ ವಿಚಾರಣೆಯಲ್ಲಿದ್ದು, ಈ ಪ್ರಕರಣಗಳಲ್ಲಿ 3 ವರ್ಷಗಳಿಗಿಂತ ಹೆಚ್ಚಿನ ಶಿಕ್ಷೆ ವಿಧಿಸಲಾಗುತ್ತದೆ. ಇದು ಕೆಸಿಒಸಿಎ ಅಡಿ ಬರುತ್ತದೆ. ಕೆಸಿಒಸಿಎ ಅಡಿ ಶಿಕ್ಷೆಯು ಕನಿಷ್ಠ 5 ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆಯವರೆಗೆ ಇರಬಹುದು. ಒಂದು ವೇಳೆ ಆರೋಪಿಗಳ ಕೃತ್ಯದಿಂದ ಯಾವುದೇ ವ್ಯಕ್ತಿಯ ಸಾವು ಸಂಭವಿಸಿದರೆ, ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ವಿಧಿಸಬಹುದಾಗಿದೆ. ಸಂಘಟಿತ ಅಪರಾಧ ಹೊಂದಿರುವ ಯಾವುದೇ ವ್ಯಕ್ತಿಯು, ಅವನ ವಿರುದ್ಧ ಹಿಂದಿನ ಪ್ರಕರಣಗಳಿಲ್ಲದಿದ್ದರೂ, ಕನಿಷ್ಠ 5 ವರ್ಷಗಳಿಂದ ಜೀವಾವಧಿ ಶಿಕ್ಷೆಗೆ ಒಳಪಡಬಹುದು ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಕೆಸಿಒಸಿಎ ಪ್ರಕಾರ, ಈ ಪ್ರಕರಣವನ್ನು ಡಿಎಸ್​​ಪಿ ಶ್ರೇಣಿಯ ಅಧಿಕಾರಿಯು ತನಿಖೆ ನಡೆಸಬೇಕು. ಈ ಸಂಬಂಧ ಎಸಿಪಿ ಉತ್ತರ ವಿಭಾಗದ ಶ್ರೀಕಾಂತ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ