ಮಹಾದಾಯಿಗಾಗಿ ಕೇಂದ್ರ ಹಸ್ತಕ್ಷೇಪ ಮಾಡಲಿ

Spread the love

ಮಹಾದಾಯಿಗಾಗಿ ಕೇಂದ್ರ ಹಸ್ತಕ್ಷೇಪ ಮಾಡಲಿ
ಗೋವಾ ಸಿಎಂ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ ಹೇಳಿದ್ದೇನು?
ಕೇಂದ್ರ ಸರ್ಕಾರ ತಾನೇ ಹೇಳಿದಂತೆ ಕುಡಿಯುವ ನೀರಿಗೆ ಯಾವುದೇ ನಿರ್ಬಂಧಗಳಿರಬಾರದು. ಕೇಂದ್ರ ಸರ್ಕಾರವೇ ಹಸ್ತಕ್ಷೇಪ ನಡೆಸಿ ಮಹಾದಾಯಿ ಯೋಜನೆ ಕಾಮಗಾರಿಗೆ ಅನುವು ಮಾಡಿಕೊಡಬೇಕೆಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಗೋವಾ ಸಿಎಂ ಮಹಾದಾಯಿ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ 2022ರಲ್ಲೇ ಸರ್ಕಾರ ಅನುಮತಿಯನ್ನು ನೀಡಿತ್ತು.
ನಂತರ ಹಲವಾರು ಬೆಳವಣಿಗೆಗಳು ನಡೆದವು. ನಂತರ ರಾಜಕೀಯ ಸಂಘರ್ಷಗಳು ಆರಂಭವಾದವು. ಕುಡಿಯುವ ನೀರಿಗೆ ನಿರ್ಬಂಧಗಳಿರಬಾರದು ಎಂದು ಕೇಂದ್ರ ಸರ್ಕಾರವೇ ಹೇಳಿದೆ.
ಇದರಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ನಡೆಸಿ ಬಗೆಹರಿಸಬೇಕು. ಅದರಂತೆ ಮೇಕೆದಾಟು ಯೋಜನೆಗೂ ಕೂಡ ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾವಣೆಯನ್ನು ಮಂಜೂರುಗೊಳಿಸಬೇಕು. ಸರ್ವಪಕ್ಷಗಳ ಸಭೆ ಕರೆಯಲು ಸಿಎಂ ಯೋಚಿಸಬೇಕೆಂದರು.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ