ಕೋಲ್ಕತ್ತಾ: ಕೇಂದ್ರ ಗೃಹ ಮಂತ್ರಿ ಅವರಿಗೆ ಸುಳ್ಳು ಹೇಳುವುದು ಶೋಭೆ ತರಲ್ಲ ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿಗೆ ಗುದ್ದು ನೀಡಿದ್ದಾರೆ. ಇಂದಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬ್ಯಾನರ್ಜಿ ಬಿಜೆಪಿ ವಿರುದ್ಧ ವಾಗ್ದಾಳಿ ನಡಸಿದರು.
ಗೃಹ ಮಂತ್ರಿಗಳಾದವರು ಸರಿಯಾದ ಅಂಕಿ ಅಂಶಗಳನ್ನಿಟ್ಟುಕೊಂಡು ಮಾತನಾಡಬೇಕು. ಶಾ ತಮ್ಮ ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳ ಅಂಕಿ ಅಂಶಗಳನ್ನ ನೋಡಿಲ್ಲ. ರಾಜ್ಯದಲ್ಲಿ ನಡೆಯುವ ಆತ್ಮಹತ್ಯೆಗಳನ್ನ ಕೊಲೆ ಎಂದು ಬಿಂಬಿಸಿ ಸುಳ್ಳು ಸುದ್ದಿ ಬಿತ್ತರಿಸುವ ಕೆಲಸವನ್ನ ಬಿಜೆಪಿ ಮಾಡ್ತಿದೆ ಎಂದು ಆಕ್ರೋಶ ಹೊರ ಹಾಕಿದರು.
ಗೃಹ ಮಂತ್ರಿಗಳಾದವರು ಸರಿಯಾದ ಅಂಕಿ ಅಂಶಗಳನ್ನಿಟ್ಟುಕೊಂಡು ಮಾತನಾಡಬೇಕು. ಶಾ ತಮ್ಮ ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳ ಅಂಕಿ ಅಂಶಗಳನ್ನ ನೋಡಿಲ್ಲ. ರಾಜ್ಯದಲ್ಲಿ ನಡೆಯುವ ಆತ್ಮಹತ್ಯೆಗಳನ್ನ ಕೊಲೆ ಎಂದು ಬಿಂಬಿಸಿ ಸುಳ್ಳು ಸುದ್ದಿ ಬಿತ್ತರಿಸುವ ಕೆಲಸವನ್ನ ಬಿಜೆಪಿ ಮಾಡ್ತಿದೆ ಎಂದು ಆಕ್ರೋಶ ಹೊರ ಹಾಕಿದರು.