ರಕ್ಷಕ್ ಬುಲೆಟ್ ಎಡವಟ್ಟಿನಿಂದ ಯುವಕನ ಕಾಲು ಮುರಿತ…
ಬಿಗ್ ಬಾಸ್ ಖ್ಯಾತಿಯ ರಕ್ಷಕ್ ಬುಲೆಟ್ ಎಡವಟ್ಟಿನಿಂದ ಯುವಕನ ಕಾಲು ಮುರಿತ ಆಗಿರುವ ಘಟನೆ ನಡೆದಿದೆ.
ಗುರುವಾರ ಬೆಳಗ್ಗೆ 11:30ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ರಕ್ಷಕ್ ಬುಲೆಟ್ ಅಜಾಗರೂಕತೆಯಿಂದ ಕಾರು ಚಲಾಯಿಸಿ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ. ವೇಣುಗೋಪಾಲ ಕಾಲು ಮುರಿದುಕೊಂಡ ಯುವಕ.
ಯುವಕನ ಬೈಕ್ ಮತ್ತು ರಕ್ಷಕ್ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಯುವಕನ ಎಡಗಾಲಿನ ಮೂಳೆ ಮುರಿತವಾಗಿದೆ.
ಶಿಡ್ಲಘಟ್ಟ ಮೂಲದ ಯುವಕ ವೇಣುಗೋಪಾಲ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಸದ್ಯ ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Laxmi News 24×7