Breaking News

ವೃದ್ಧನ ಡಿಜಿಟಲ್ ಅರೆಸ್ಟ್ ಮಾಡಿ ₹1.77 ಕೋಟಿ ದೋಚಿದ ಸೈಬರ್ ವಂಚಕರು

Spread the love

ಬೆಂಗಳೂರು: ವೃದ್ಧನನ್ನು ಒಂದು ವಾರ ಡಿಜಿಟಲ್ ಬಂಧನದಲ್ಲಿಟ್ಟ ಸೈಬರ್ ವಂಚಕರು 1.77 ಕೋಟಿ ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಸದಾನಂದನಗರದ ಎನ್‌ಜಿಇಎಫ್ ಲೇಔಟ್ ನಿವಾಸಿ ಜಿ.ವಸಂತ ಕುಮಾರ್ (81) ಸೈಬರ್ ವಂಚನೆಗೆ ಒಳಗಾದವರು. ಈ ಸಂಬಂಧ ಅವರು ನೀಡಿದ ದೂರಿನ ಮೇರೆಗೆ ನಗರದ ಪೂರ್ವ ವಿಭಾಗದ ಸಿಇಎನ್​​ ಪೊಲೀಸ್ ಠಾಣೆಯಲ್ಲಿ ಜುಲೈ 23ರಂದು ಪ್ರಕರಣ ದಾಖಲಾಗಿದೆ.

ಮುಂಬೈನ ಕೊಲಾಬಾ ಪೊಲೀಸರ ಹೆಸರಿನಲ್ಲಿ ಜುಲೈ 5ರಂದು ಕರೆ ಮಾಡಿದ್ದ ಸಂದೀಪ್ ಜಾಧವ್ ಎಂಬಾತ, ತಮ್ಮ ಆಧಾರ್ ನಂಬರ್‌ನಿಂದ ಜೆಟ್ ಏರ್‌ವೇಸ್ ಸಂಸ್ಥೆಯ ನರೇಶ್ ಗೋಯಲ್ ಎಂಬವರ ಹೆಸರಿಗೆ ಕೋಟ್ಯಂತರ ರೂ. ವರ್ಗಾವಣೆಯಾಗಿದೆ ಎಂದು ಬೆದರಿಸಿದ್ದಾನೆ. ಜುಲೈ 9ರಿಂದ ಜು.15ರವರೆಗೆ ಡಿಜಿಟಲ್ ಅರೆಸ್ಟ್ ಮಾಡಿದ್ದ ವಂಚಕ, ವಿಡಿಯೋ ಕರೆ ಮೂಲಕ ವಾಟ್ಸ್​ಆ್ಯಪ್​​ನಲ್ಲಿ ನಕಲಿ ಬಂಧನದ ವಾರಂಟ್ ತೋರಿಸಿ ಆತಂಕ ಹುಟ್ಟಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್: FIR ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಶಾಸಕ ಬೈರತಿ ಬಸವರಾಜ್

Spread the love ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಭಾರತಿನಗರ ಪೊಲೀಸ್‌ ಠಾಣೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ