Breaking News

ಗದಗದಲ್ಲಿ ಇನ್ನೂ ನಿಂತಿಲ್ಲ ಯೂರಿಯಾ ಕೊರತೆ

Spread the love

ಗದಗ, ಆಗಸ್ಟ್ 6: ಯೂರಿಯಾ (Urea) ಗೊಬ್ಬರಕ್ಕಾಗಿ ಶಾಲೆಬಿಟ್ಟು ರೈತರ ಮಕ್ಕಳ ಸರದಿ ಸಾಲು. ಕೈಯಲ್ಲಿ ಆಧಾರ್ ಕಾರ್ಡ್ ಹಿಡಿದುಕೊಂಡು, ‘ನಾವೂ ರೈತರ ಮಕ್ಕಳು, ನಮಗೊಂದು ಯೂರಿಯಾ ಗೊಬ್ಬರ ಕೊಡಿ’ ಎಂದು ಸಾಲಿನಲ್ಲಿ ನಿಂತಿರುವ ಮಕ್ಕಳು. ನಸುಕಿನ ನಾಲ್ಕು ಗಂಟೆಗೇ ಬಂದ ಮಕ್ಕಳು, ರೈತರು, ಅನ್ನ, ನೀರು, ನಿದ್ದೆ ಇಲ್ಲದೇ ಗೊಬ್ಬರಕ್ಕಾಗಿ ಪರದಾಡುತ್ತಿರುವುದು. ಈ ಎಲ್ಲ ದೃಶ್ಯಗಳು ಕಂಡಿದ್ದು, ಗದಗ (Gadag)  ಜಿಲ್ಲೆಯಲ್ಲಿ. ಗದಗ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರ ಗೋಳಾಟ ಇನ್ನೂ ನಿಂತಿಲ್ಲ. ಸರ್ಕಾರ ಗೊಬ್ಬರ ಕೊರತೆ ಇಲ್ಲ ಎನ್ನುತ್ತಿದೆ. ಆದರೆ, ರೈತರಿಗೆ ಮಾತ್ರ ಗೊಬ್ಬರ ಸಿಗುತ್ತಿಲ್ಲ.

ಗದಗ ಜಿಲ್ಲೆಯಲ್ಲಿ ಮಳೆ ಇನ್ನೂ ನಿಂತಿಲ್ಲ. ಅತಿಯಾದ ಮಳೆಯಿಂದ ತೇವಾಂಶ ಹೆಚ್ಚಾಗಿ ಗೋವಿನ ಜೋಳ ಕೊಳೆಯುತ್ತಿದೆ. ಸಕಾಲಕ್ಕೆ ಯೂರಿಯಾ ಹಾಕದಿದ್ದರೆ ಬೆಳೆ ಸಂಪೂರ್ಣ ಹಾನಿಯಾಗಲಿದೆ. ಹೀಗಾಗಿ ಅನ್ನದಾತರು ಗೊಬ್ಬರಕ್ಕಾಗಿ ಅನ್ನ, ನೀರು, ನಿದ್ದೆ ಬಿಟ್ಟು ಹಗಲು, ರಾತ್ರಿ ಕಾಯುತ್ತಿದ್ದಾರೆ. ಆದರೆ, ರೈತರಿಗೆ ಗೊಬ್ಬರ ಸಿಗ್ತಿಲ್ಲ. ಅದರಲ್ಲೂ ಗದಗನ ಎಸ್​​ವಿ ಹಲವಾಗಲಿ ಆ್ಯಂಡ್ ಸನ್ಸ್ ಗೊಬ್ಬರ ಅಂಗಡಿಯಲ್ಲಿ ಒಬ್ಬರಿಗೆ ಒಂದೇ ಚೀಲ ನಿಯಮ ಮಾಡಿದ್ದಾರೆ. ಹೀಗಾಗಿ ರೈತರು ಗೊಬ್ಬರ ಖರೀದಿಗೆ ತಮ್ಮ ಮಕ್ಕಳ ಶಿಕ್ಷಣ ಬಿಡಿಸಿಕೊಂಡು ಬಂದು ಗೊಬ್ಬರಕ್ಕೆ ಕ್ಯೂ ನಿಲ್ಲಿಸಿದ್ದಾರೆ.

ಯೂರಿಯಾ ಗೊಬ್ಬರಕ್ಕಾಗಿ ಮಕ್ಕಳ ಶಿಕ್ಷಣಕ್ಕೆ ಕೊಡಲಿಪೆಟ್ಟು ಬಿದ್ದಿದೆ. 8, 9 ಹಾಗೂ SSLC ಮಕ್ಕಳು ಶಾಲೆ ಬಿಟ್ಟು ಸರದಿಯಲ್ಲಿ ನಿಂತಿದ್ದಾರೆ. ರೈತರ ಮಕ್ಕಳು ಶಿಕ್ಷಣ ಬಿಟ್ಟು ಬೀದಿಗೆ ಬಂದಿದ್ದು, ವ್ಯಾಪಕ ಅಕ್ರೋಶಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ