ಬಾವಿಯಲ್ಲಿ ಬಿದ್ದು 8 ವರ್ಷದ ಬಾಲಕಿ ದುರ್ಮರಣ
ಆಟವಾಡಲು ಹೋಗಿ ಬಾವಿಯಲ್ಲಿ ಬಾಲಕಿ ಬಿದ್ದು ಬಾಲಕಿಯ ರಕ್ಷಣೆಗೆ ಹರಸಾಹಸ ಪಟ್ಟು ಕೊನೆಗೆ ಪ್ರಯತ್ನ
ವಿಫಲವಾಗಿ ಅಗ್ನಿ ಶಾಮಕ ಸಿಬ್ಬಂದಿ ತಡರಾತ್ರಿ ಬಾಲಕಿ ಶವ ಹೊರಗೆ ತೆಗೆದಿರುವ ದುರ್ಘಟನೆ ವಿಜಯಪುರ
ಜಿಲ್ಲೆಯ ಇಂಡಿ ಪಟ್ಟಣದ ಬಳಿಯ ಧನಸಿಂಗ್ ( ಮೋನಪ್ಪ ನಗರ) ತಾಂಡಾದಲ್ಲಿ ನಡೆದಿದೆ. ತಾಯಿಯೊಂದಿಗೆ
ಕುರಿ ಮೇಯಿಸುವಾಗ ಆಟವಾಡುತ್ತಾ 8 ವರ್ಷದ ಅರ್ಚನಾ ರಾಠೋಡ ಬಾವಿಯಲ್ಲಿ ನಿನ್ನೆ ಸಾಯಂಕಾಲ
ಬಾವಿಯಲ್ಲಿ ಬಿದ್ದಿದ್ದಳು. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯಿಂದ ಶವ ಹೊರಕ್ಕೆ ತೆಗೆಯಲಾಯಿತು.
ಸ್ಥಳದಲ್ಲಿ ಬಾಲಕಿ ಪೋಷಕರು ಹಾಗೂ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಡಿತ್ತು.
ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7