Breaking News

ವಿವಾಹಿತೆಯನ್ನು ಇರಿದು ಕೊಂದು, ಅದೇ ಚಾಕುವಿನಿಂದ ಚುಚ್ಚಿಕೊಂಡು ಸಾವನ್ನಪ್ಪಿದ

Spread the love

ಬೆಳಗಾವಿ: ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿಸುತ್ತಿದ್ದ ವಿವಾಹಿತ ಮಹಿಳೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಬಳಿಕ ಅದೇ ಚಾಕುವಿನಿಂದ ತಾನೂ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.

ಬೀಡಿ ಗ್ರಾಮದ 28 ವರ್ಷದ ಮಹಿಳೆ ಕೊಲೆಯಾದವರು. ಕೊಲೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆನಂದ ರಾಜು ಸುತಾರ(30) ಎಂದು ಗುರುತಿಸಲಾಗಿದೆ. ಇಬ್ಬರು ಒಂದೇ ಗ್ರಾಮದವರಾಗಿದ್ದು, ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕೊಲೆಗೆ ಅನೈತಿಕ ಸಂಬಂಧ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.

ಕೊಲೆಯಾದ ಮಹಿಳೆಗೆ ಮದುವೆಯಾಗಿದ್ದು, ಎರಡು ಮಕ್ಕಳಿದ್ದಾರೆ. ಆನಂದನಿಗೂ ಮದುವೆ ಆಗಿ ಮೂರು ಮಕ್ಕಳಿದ್ದಾರೆ. ಈತನ ಪತ್ನಿ‌ ಗರ್ಭಿಣಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೂ ಆನಂದ ಮತ್ತು ಮಹಿಳೆ ವಿವಾಹೇತರ ಸಂಬಂಧ ಹೊಂದಿದ್ದರು ಎನ್ನಲಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಇಬ್ಬರು ಪರಸ್ಪರ ಪ್ರೀತಿಸುತ್ತಿರುವ ವಿಷಯ ಮಹಿಳೆಯ ಗಂಡನಿಗೆ ತಿಳಿದಿತ್ತು. ಇದರಿಂದ ಮನೆಯಲ್ಲಿ ಸಣ್ಣಪುಟ್ಟ ಗಲಾಟೆಗಳು ಶುರುವಾಗಿದ್ದವು. ಅಲ್ಲದೇ ಮಹಿಳೆಯ ಪತಿ ನಂದಗಡ ಪೊಲೀಸ್ ಠಾಣೆಯಲ್ಲಿ ಆನಂದ ವಿರುದ್ಧ ದೂರು ನೀಡಿದ್ದರು. ಪೊಲೀಸರು ಆನಂದನನ್ನು ಠಾಣೆಗೆ ಕರೆಸಿ ಇನ್ಮುಂದೆ ಮಹಿಳೆಯ ಸಹವಾಸಕ್ಕೆ ಹೋಗದಂತೆ ಮತ್ತು ಅನೈತಿಕ ಸಂಬಂಧ ಮುಂದುವರಿಸದಂತೆ ಇಬ್ಬರಿಗೂ ಬುದ್ಧಿವಾದ ಹೇಳಿ ಕಳುಹಿಸಿದ್ದರು.


Spread the love

About Laxminews 24x7

Check Also

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು.

Spread the love BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ