ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದೆ.
ಶ್ರೀ ಅಪ್ಪಣಗೌಡ ಪಾಟೀಲ ಅವರ ದೂರದೃಷ್ಟಿಯ ಪರಿಣಾಮವಾಗಿ ಆರಂಭವಾದ ಈ ಸಹಕಾರಿ ಸಂಘವು, ರೈತರ ಹಾಗೂ ಸಾಮಾನ್ಯ ಜನರ ಬೆಳವಣಿಗೆಗಾಗಿ ಸದಾ ಶ್ರಮಿಸಿರುವ ಸಂಸ್ಥೆಯಾಗಿದೆ. ಇಂತಹ ಸಂಸ್ಥೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮುಂಬರುವ ಈ ಚುನಾವಣೆ ಆ ದಿಸೆಯಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದಲೇ ನಾಳೆಯಿಂದ ಪ್ರಚಾರ ಪ್ರಾರಂಭಿಸಿ, ಶ್ರಮವಹಿಸಿ ಈ ಸಂಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ನಿಜವಾದ ಶಕ್ತಿ ನಮ್ಮ ಒಗ್ಗಟ್ಟಿನಲ್ಲಿ ಮತ್ತು ಕಾರ್ಯಸಾಧನೆಗಳಲ್ಲಿ ಅಡಗಿದೆ. ಜನರ ಹಿತಕ್ಕಾಗಿ ಕೆಲಸ ಮಾಡಿದ ಈ ಸಹಕಾರಿ ಸಂಘವನ್ನು ಉಳಿಸಿ ಕಾಪಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ.
ಈ ಸಂದರ್ಭದಲ್ಲಿ ಸಹಕಾರಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Laxmi News 24×7