ದ್ವಿಚಕ್ರ ವಾಹನಕ್ಕೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಬೆಳಗಾವಿ ಜಿಲ್ಲೆಯ ಬೆಳವಟ್ಟಿ ಗ್ರಾಮದ ಯುವತಿ ಸಾವನ್ನಪ್ಪಿ ಆಕೆಯ ತಾಯಿ ಮತ್ತು ಮಾವ ಗಾಯಗೊಂಡ ದುರ್ಘಟನೆಯು ಭಾನುವಾರ ಸಂಜೆ ಬಿಜಗರ್ಣಿ-ಬೆಳವಟ್ಟಿ ರಸ್ತೆಯ ಕವಳೆವಾಡಿ ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಯುವತಿಯನ್ನು ಬೆಳವಟ್ಟಿಯ ನಿವಾಸಿ, 18 ವರ್ಷದ ರೋಹಿಣಿ ರಾಮಲಿಂಗ ಚೌಗುಲೆ ಎಂದು ಗುರುತಿಸಲಾಗಿದೆ. ಆಕೆಯ ತಾಯಿ ಲಕ್ಷ್ಮೀ ರಾಮಲಿಂಗ ಚೌಗುಲೆ (45) ಮತ್ತು ಚಂದಗಡ ತಾಲೂಕಿನ ತುಡಯೇ ಗ್ರಾಮದ ನಿವಾಸಿ, ಆಕೆಯ ಮಾವ ಸತೀಶ್ ವಿಷ್ಣು ಮೋಹಿತೆ (40) ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ನಂತರ ಗಂಭೀರವಾಗಿ ಗಾಯಗೊಂಡಿದ್ದ ರೋಹಿಣಿಯನ್ನು ತಕ್ಷಣವೇ ಸಿವಿಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾಳೆ. ಗಾಯಗೊಂಡಿದ್ದ ಲಕ್ಷ್ಮೀ ಅವರ ಸ್ಥಿತಿ ಗಂಭೀರವಾಗಿದೆ. ತುಡಯೇಯಿಂದ ಬೆಳವಟ್ಟಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪಂಚನಾಮೆ ನಡೆಸಿದ್ದಾರೆ.
ಕಾರು ಮತ್ತು ಮೋಟಾರ್ಸೈಕಲ್ ಡಿಕ್ಕಿಯಿಂದ ಈ ಅಪಘಾತ ಸಂಭವಿಸಿದ್ದು ವಡಗಾವನ ಜುನೈದ್ ರಾಜಗೋಳಿ ಎಂಬುವವರ ವಿರುದ್ಧ ಎಫ್ಐಆರ್ ದಾಖಲಿಸುವ ಪ್ರಕ್ರಿಯೆನಡೆದಿದೆ. ಪೊಲೀಸ್ ಇನ್ಸ್ಪೆಕ್ಟರ್ ನಾಗನಗೌಡ ಕಟ್ಟಿಮನಿಗೌಡರ್ ಮತ್ತು ಸಿಬ್ಬಂದಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮೃತ ರೋಹಿಣಿ ಅಜ್ಜಿ, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾಳೆ.
ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸುವ ಪ್ರಕ್ರಿಯೆ ನಡೆದಿತ್ತು.
Laxmi News 24×7