Breaking News

ಕ್ಯಾನ್ಸರ್ ಪೀಡಿತನಿಂದ ವಿದ್ಯಾರ್ಥಿನಿ ಕೊಲೆ ಕೇಸ್​: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು

Spread the love

ಚಿತ್ರದುರ್ಗ, ಆಗಸ್ಟ್​ 21: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್​​ನಿಂದಲೇ ವಿದ್ಯಾರ್ಥಿನಿ (student) ವರ್ಷಿತಾ(19) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್​ಪಿ ಪಿ.ದಿನಕರ್, ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್, ಪಿಎಸ್​ಐ ಸುರೇಶ್ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಆರೋಪಿಯ ಪ್ರತಿ ಜಾಡು ಹಿಡಿದು ತನಿಖೆ ಮಾಡಲಾಗುತ್ತಿದೆ. ಈ ಮಧ್ಯೆ ಕಿರಾತಕ ಚೇತನ್ ಪ್ರೀ ಪ್ಲ್ಯಾನ್ಡ್  ಮರ್ಡರ್ ರಹಸ್ಯ ಬಯಲಾಗಿದೆ. ಟಿವಿ9ಗೆ ವರ್ಷಿತಾ ಮತ್ತು ಚೇತನ್ ಜೊತೆಗಿದ್ದ ಕೊನೆ ಕ್ಷಣದ ಸಿಸಿಟಿವಿ ದೃಶ್ಯ ಲಭ್ಯವಾಗಿದೆ.

ಕೊಲೆಗೆ ಸಂಚು ರೂಪಿಸಿದ್ದ ಚೇತನ್

ವರ್ಷಿತಾ ಮತ್ತು ಚೇತನ್ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರಂತೆ. ಇತ್ತೀಚೆಗೆ ಚೇತನ್​ಗೆ ಕ್ಯಾನ್ಸರ್ ಇರೋದು ಗೊತ್ತಾಗಿದೆ. ಬಳಿಕ ವರ್ಷಿತಾ ದೂರಾಗಿದ್ದು, ಮತ್ತೊಬ್ಬನನ್ನ ಪ್ರೀತಿಸುತ್ತಿದ್ದಳಂತೆ. ಈ ವಿಷಯ ತಿಳಿದು ಕೆರಳಿದ ಚೇತನ್, ನಯವಾಗಿ ಆಕೆಯನ್ನ ಗೋನೂರು ಬಳಿ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಕತ್ತು ಹಿಸುಕಿ ಕೊಂದಿದ್ದು, ಪೆಟ್ರೋಲ್ ಹಾಕಿ ಶವ ಸುಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ.


Spread the love

About Laxminews 24x7

Check Also

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ!!

Spread the love ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ!! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ