Breaking News

ನೂರಾರು ಕಾಯಕ ಪಂಗಡಗಳ ಒಕ್ಕೂಟದಿಂದ ಶ್ರಾವಣ ಮಾಸದ ಪಾದಯಾತ್ರೆ ಹಾಗೂ ಪ್ರವಚನ

Spread the love

ನೂರಾರು ಕಾಯಕ ಪಂಗಡಗಳ ಒಕ್ಕೂಟದಿಂದ ಶ್ರಾವಣ ಮಾಸದ ಪಾದಯಾತ್ರೆ ಹಾಗೂ ಪ್ರವಚನ
ಶ್ರಾವಣ ಮಾಸದ ಪವಿತ್ರ ಸಂದರ್ಭದಲ್ಲಿ, ಅಖಿಲ ಲಿಂಗಾಯತ ನೂರು ಕಾಯಕ ಪಂಗಡಗಳ ಒಕ್ಕೂಟವು (ರಿ) ಬೆಳಗಾವಿಯಲ್ಲಿ ಶ್ರದ್ಧಾ ಭಕ್ತಿಯಿಂದ ಪಾದಯಾತ್ರೆ ಮತ್ತು ಧಾರ್ಮಿಕ ಪ್ರವಚನ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಈ ಪಾದಯಾತ್ರೆಯು ‘ನೂರು ಕಾಯಕ ಪಂಗಡದ ಮನೆಗಳಿಗೆ ಪೂಜ್ಯರ ನಡೆ’ ಎಂಬ ವಿಶೇಷ ಧ್ಯೇಯವಾಕ್ಯದೊಂದಿಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ಭಾಗವಹಿಸಿ ಭಕ್ತರನ್ನು ಆಶೀರ್ವದಿಸಿದರು.May be an image of 6 people, dais, hospital and text that says "ម ಕಂಗಾಯತ ನೂರು ಕಾಯಕಪಂಗಡಗಳ ಕಾಯಕ ಒಕ್ಕೂಟ (၁) 0621242025 AKHILA INGAYAT NDORUKAYAKA NDORU ΚΑΥΑΚΑ PANGADAGALA VAKKUT (R) ಸರ್ರಾಪಣಮಾಸ ನಿಮಿತ್ಯ ಸಾಜರ ನಡೆ ನ ಿಧಯಶ್ರೀ ಸಿಸ್ಧವಾಮರೆ ಪಂಗಡದವರ ಮನ ಕಡೆ အတယ 다구한 ಸಂಬಾದನಾ .l.c ಮಂರವಾಗ: 2042714 448, 9632296209"
ಶ್ರೀ ಜಗದ್ಗುರು ಮಾಚಿದೇವ ಮಹಾಸಂಸ್ಥಾನ, ಚಿತ್ರದುರ್ಗ ಮಠ, ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಹಿರೇಮಠ, ಹುಕ್ಕೇರಿ, ಶ್ರೀ ಸಿದ್ದಬಸವ ದೇವರು, ಶೂನ್ಯಸಂಪಾದನಾ ಹುಣಸಿಕೊಳ್ಳ ಮಠ, ಯಮಕನಮರಡಿ, ಶ್ರೀ ರಾಚಯ್ಯ ಮಹಾಸ್ವಾಮಿಗಳು, ಶಿವಪೂಜಿಮಠ, ಕಾಕತಿ ಅವರು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಅನೇಕ ಭಕ್ತರು, ಹಿರಿಯರು, ಯುವಕರು ಮತ್ತು ಮಹಿಳೆಯರು ಉತ್ಸಾಹದಿಂದ ಭಾಗವಹಿಸಿದ್ದರು.
ಈ ಕಾರ್ಯಕ್ರಮದ ಯಶಸ್ಸಿಗೆ ಒಕ್ಕೂಟದ ಸ್ಥಾಪಕ ರಾಜ್ಯಾಧ್ಯಕ್ಷರಾದ ಪ್ರೇಮ್ ಮಲ್ಲಪ್ಪ ಚೌಗುಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಆರ್ ಎಕ್ಸ್ ಎಂ ಬಿ, ರಾಜ್ಯ ಖಜಾಂಚಿ ಪ್ರಸಾದ್ ಆರ್ ಹಿರೇಮಠ ಹಾಗೂ ಬೆಳಗಾವಿ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಸಹಕರಿಸಿದ್ದರು.

Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ