Breaking News

ವೈಕುಂಠ ಏಕಾದಶಿಯನ್ನು ಈ ವರ್ಷ ಆಚರಿಸಲು ಸಾಧ್ಯವಿಲ್ಲ.

Spread the love

ಬೆಂಗಳೂರು(ಡಿ.24): ನಾಳೆ ವೈಕುಂಠ ಏಕಾದಶಿ. ಕೊರೋನಾ ಬಂದಿಲ್ಲ ಎಂದಿದ್ದರೆ ಎಲ್ಲಾ ದೇವಾಲಯಗಳಲ್ಲೂ ಭಕ್ತರದ್ದೇ ಕಾರುಬಾರು ಇರುತ್ತಿತ್ತು. ಪ್ರತೀ ವರ್ಷ ಸಂಭ್ರಮದಿಂದ ಆಚರಿಸಲಾಗುತ್ತಿದ್ದ ವೈಕುಂಠ ಏಕಾದಶಿಯನ್ನು ಈ ವರ್ಷ ಆಚರಿಸಲು ಸಾಧ್ಯವಿಲ್ಲ. ಕಾರಣ ಮಹಾಮಾರಿ ಕೊರೋನಾ. ಹೌದು, ಈ ಕೊರೋನಾ ಕಾರಣದಿಂದಾಗಿ ನಾಳಿನ ವೈಕುಂಠ ಏಕಾದಶಿಯಂದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ. ಬೆಂಗಳೂರಿನ ಬಹುತೇಕ ಎಲ್ಲಾ ದೇವಾಲಯಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗುತ್ತದೆ ಎಂದು ತಿಳಿದು ಬಂದಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಭಕ್ತರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಸರ್ಕಾರದ ಆದೇಶದಂತೆ‌ ಪೂಜೆಗಳು ನಡೆಯುತ್ತವೆ, ಆದರೆ ಭಕ್ತರಿಗೆ ದೇವಾಲಯದೊಳಗೆ ಪ್ರವೇಶವಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.ಇನ್ನು, ಇಸ್ಕಾನ್ ದೇವಾಲಯದಲ್ಲಿ ಭಕ್ತರಿಗೆ ಆನ್​​​ಲೈನ್ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ. ದೇವಸ್ಥಾನದ ಅಧಿಕೃತ ವೆಬ್ ಸೈಟ್ ಆದ www.iskconbangalore.org ನಲ್ಲಿ ಇಡೀ ಕಾರ್ಯಕ್ರಮದ ನೇರ ಪ್ರಸಾರವನ್ನು ನೋಡಬಹುದಾಗಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ