Breaking News

ವಿನಾ ಕಾರಣ ನನ್ನ ಮೇಲೆ ದಂದ ವಿಧಿಸಿರುವ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು:B.J.P. ಶಾಸಕಎಂ.ಪಿ.ಕುಮಾರಸ್ವಾಮಿ

Spread the love

ಬೆಂಗಳೂರು: ಮಾಸ್ಕ್ ಇಲ್ಲದೇ ಪ್ರಯಾಣಿಸಿದ್ದಕ್ಕಾಗಿ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಪೊಲೀಸರು ದಂಡ ವಿಧಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿರುವ ಶಾಸಕ, ಬೆಂಗಳೂರಿನ ಶೇಷಾದ್ರಿಪುರಂ ಕಡೆಯಿಂದ ಶಾಸಕರ ಭವನಕ್ಕೆ ತೆರಳುತ್ತಿದ್ದಾಗ ಶೇಷಾದ್ರಿಪುರಂ ಪೊಲೀಸ್ ಠಾಣಾ ಮುಂಭಾಗ ಸಂಚಾರಿ ವ್ಯತ್ಯಯದಿಂದ ಕಾರು ನಿಲುಗಡೆಗೊಂಡಿತು. ಈ ಸಂದರ್ಭದಲ್ಲಿ ಕಾರಿನ ಟಿಂಟ್ ಗ್ಲಾಸ್ ಇಳಿಸುವಂತೆ ಟ್ರಾಫಿಕ್ ಪೊಲೀಸರು ಒತಾಯಿಸಿ ಕಾರಿನೊಳಗಡೆ ಇದ್ದ ನನಗೆ ಮಾಸ್ಕ್ ಹಾಕಿಸಿದ್ದರು. ಬಳಿಕ 250 ರೂ ದಂಡ ವಿಧಿಸಿದ್ದಾರೆ.

ಜವಾಬ್ದಾರಿಯುತ ವ್ಯಕ್ತಿಯಾಗಿ ಮರು ಮಾತನಾಡದೇ ದಂಡ ಪಾವತಿಸಿದ್ದೇನೆ. ವಿನಾ ಕಾರಣ ನನ್ನ ಮೇಲೆ ದಂದ ವಿಧಿಸಿರುವ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ