Breaking News

ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ವಿವಾಹ

Spread the love

ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ವಿವಾಹ ನಿಶ್ಚಯವಾಗಿದ್ದು, ಡಿಸೆಂಬರ್ 28ರಂದು ವಿವಾಹ ನಡೆಯಲಿದೆ.
ಮಗಳ ಮದುವೆ ತಯಾರಿಯಲ್ಲಿ ರಮೇಶ್ ಸಖತ್ ಬ್ಯುಸಿಯಾಗಿದ್ದು, ನಿಹಾರಿಕಾ ಅವರು ಅಕ್ಷಯ್ ಅವರನ್ನು ಕೈ ಹಿಡಿಯುತ್ತಿದ್ದಾರೆ. ಅಕ್ಷಯ್ ಸಿನಿಮಾ ಕ್ಷೇತ್ರದವರಲ್ಲ ಬದಲಿಗೆ ನಿಹಾರಿಕಾ ಅವರ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡೂ ಕುಟುಂಬದವರು ನಿಶ್ಚಯಿಸಿ ವಿವಾಹ ಮಾಡುತ್ತಿದ್ದಾರೆ.
ಕೊರೊನಾ ಹಿನ್ನೆಲೆ ಗ್ರ್ಯಾಂಡ್ ಆಗಿ ವಿವಾಹ ಮಾಡುತ್ತಿಲ್ಲ. ಹೆಚ್ಚು ಜನರು ಸೇರುವ ಕಾರಣ ಕೊರೊನಾ ಮುನ್ನಚ್ಚರಿಕೆ ಪಾಲಿಸುವುದು ಕಷ್ಟ. ಹೀಗಾಗಿ ಕುಟುಂಬಸ್ಥರು ಹಾಗೂ ಆಪ್ತರು ಮಾತ್ರ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ. ಯಾರಿಗೆಲ್ಲ ಆಹ್ವಾನಿಸಲಾಗುತ್ತಿದೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ