Breaking News

ನಿವೃತ್ತಿ ಹೊಂದಲು ಕೇವಲ ಮೂರು ದಿನ ಬಾಕಿ ಇರುವಾಗಲೇ ಹಿರಿಯ ಐಪಿಎಸ್ ಅಧಿಕಾರಿ ನಿಧನ ಹೊಂದಿರುವ ಘಟನೆ ನಡೆದಿದೆ. 

Spread the love

ನಿವೃತ್ತಿ ಹೊಂದಲು ಕೇವಲ ಮೂರು ದಿನ ಬಾಕಿ ಇರುವಾಗಲೇ ಹಿರಿಯ ಐಪಿಎಸ್ ಅಧಿಕಾರಿ ನಿಧನ ಹೊಂದಿರುವ ಘಟನೆ ನಡೆದಿದೆ. 

 ಕೇರಳದ ಎಡಿಜಿಪಿ ಮಹಿಪಾಲ್ ಯಾದವ್ ನಿಧನರಾಗಿದ್ದಾರೆ. ಮಹಿಪಾಲ್ ಅವರ ಆರೋಗ್ಯ ಸ್ಥಿತಿ ವಿಷಮಿಸಿದ್ದರಿಂದ, ಅವರ ಕುಟುಂಬದ ಸದಸ್ಯರು ಅವರನ್ನು ತವರು ರಾಜ್ಯ ರಾಜಸ್ಥಾನಕ್ಕೆ ಕರೆದೊಯ್ದು ಜೈಪುರದ ಆಸ್ಪತ್ರೆಗೆ ದಾಖಲಿಸಿದ್ದರು.

ತಮ್ಮ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್‌ ಪದಕಕ್ಕೆ ಭಾಜನರಾಗಿದ್ದ ಮಹಿಪಾಲ್ ಯಾದವ್, ಕೇರಳ ಅಬಕಾರಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ಅವರು ವೈದ್ಯಕೀಯ ರಜೆಯ ಮೇಲೆ ಕರ್ತವ್ಯದಿಂದ ತೆರಳುವುದಕ್ಕೂ ಮುನ್ನ, ಅವರನ್ನು ಇತ್ತೀಚೆಗಷ್ಟೇ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ಕೇರಳ ಸರಕಾರ ನೇಮಿಸಿತ್ತು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ