ಶೆಟ್ಟಿ ಗಲ್ಲಿ ಗಣೇಶೋತ್ಸವ ಮಂಡಳದಿಂದ ಮಹಾಪ್ರಸಾದಶ್ರೀ ಸತ್ಯನಾರಾಯಣಸ್ವಾಮಿಯ ದರ್ಶನ ಪಡೆದ ಭಕ್ತರು
ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಡಳ ಶೆಟ್ಟಿ ಗಲ್ಲಿಇಂದು 5ನೇ ದಿನ ಶ್ರೀ ಸತ್ಯನಾರಾಯಣ ಪೂಜೆಮಹಾಪ್ರಸಾದದ ಆಯೋಜನೆ ಮಾಡಿದ ಮಂಡಳಸಾವಿರಾರು ಜನರು ಪಡೆದು ಲಾಭ
ಬೆಳಗಾವಿಯ ಶೆಟ್ಟಿ ಗಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಡಳದ ವತಿಯಿಂದ ಮಹಾಪ್ರಸಾದವನ್ನು ಆಯೋಜಿಸಲಾಗಿತ್ತು.
ಬೆಳಗಾವಿ ಮಹಾನಗರದ ಶೆಟ್ಟಿ ಗಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾದ ಶ್ರೀ ಗಣೇಶನ ಮಂಟಪದಲ್ಲಿ ಇಂದು ಗಣೇಶೋತ್ಸವದ 5ನೇ ದಿನ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಮಹಾಪ್ರಸಾದವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 2 ರಿಂದ ಮೂರು ಸಾವಿರ ಜನರು ಈ ಮಹಾಪ್ರಸಾದದ ಲಾಭವನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಗೋರಕ್ಷಕ ನಿಲೇಶ್ ಅವರು ಪ್ರತಿ ವರ್ಷದಂತೆ ಈ ಬಾರಿಯೂ 39ನೇ ವರ್ಷ ಶೆಟ್ಟಿ ಗಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಡಳವು ಅತ್ಯಂತ ವಿಜೃಂಭಣೆಯಿಂದ ಗಣೇಶೋತ್ಸವವನ್ನು ಆಚರಿಸುತ್ತಿದ್ದು, ಮಹಾಪ್ರಸಾದವನ್ನು ಆಯೋಜಿಸಿದೆ ಎಂದರು.
ಇನ್ನು ಮಂಡಳದ ಅಧ್ಯಕ್ಷರು ಮಾತನಾಡಿ ಮಾಹಿತಿಯನ್ನು ನೀಡಿದರು. ವಾರದಲ್ಲಿ ಮೂರು ಬಾರಿ ಅಲ್ಪೋಪಹಾರದೊಂದಿಗೆ 5ನೇ ದಿನ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಮಹಾಪ್ರಸಾದವನ್ನು ಆಯೋಜಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಉಮೇಶ್, ದೀಪಕ್ ಶೆಟ್ಟಿ, ಕೃಷ್ಣಾ ಚವ್ಹಾಣ್ ಸೇರಿದಂತೆ ಶೆಟ್ಟಿ ಗಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಡಳದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.
Laxmi News 24×7