Breaking News

ಗಣೇಶ ಮೂರ್ತಿಗಳ ವಿಸರ್ಜನೆಗೆ ಸಚಿವ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಸೂಕ್ತ ವ್ಯವಸ್ಥೆ ಮಲಗೌಡಾ ಪಾಟೀಲ ಸೂಚನೆ …

Spread the love

ಗಣೇಶ ಮೂರ್ತಿಗಳ ವಿಸರ್ಜನೆಗೆ ಅಳತಗಾ ಸೇತುವೆ ಸಿದ್ಧತೆಗೆ ಅಗತ್ಯ ಕ್ರಮಕ್ಕೆ ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ ಸೂಚನೆ …
ಮಾರ್ಕಂಡೇಯ ನದಿಯ ಅಳತಗಾ ಸೇತುವೆಗೆ ಭೇಟಿವಿವಿಧ ಗ್ರಾಮಸ್ಥರು ಅಧಿಕಾರಿಗಳು ಭಾಗಿಗಣೇಶ ಮೂರ್ತಿಗಳ ವಿಸರ್ಜನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ
ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ ಅಧಿಕಾರಿಗಳಿಗೆ ಮಾರ್ಗದರ್ಶನ
ಸೇತುವೆಯ ಅಕ್ಕ-ಪಕ್ಕ ಗಣೇಶ ಮೂರ್ತಿಗಳ ವಿಸರ್ಜನೆಗೆ ಆಗಮಿಸುವ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಗ್ರಾಮ ಪಂಚಾಯತಿಯವರು ಸ್ವಚ್ಛತೆ ಮತ್ತು ಸೂಕ್ತ ವಿದ್ಯುತ್ ವ್ಯವಸ್ಥೆ ಕಲ್ಪಿಸಿದ್ದಾರೆ. ಸಾರ್ವಜನಿಕರು ಇಲ್ಲಿಗೆ ಆಗಮಿಸಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಬೇಕು ಎಂದು ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ ತಿಳಿಸಿದ್ದಾರೆ.
ಬೆಳಗಾವಿ ತಾಲೂಕಿನ ಅಳತಗಾ ಕ್ರಾಸ್ನ ಮಾರ್ಕಂಡೇಯ ನದಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜಿಸುವ ಕಂಗ್ರಾಳಿ ಖುರ್ದ್-ಅಳತಗಾ ಸೇತುವೆಗೆ ಪೊಲೀಸ್, ಗ್ರಾಮ ಪಂಚಾಯತಿ ಸದಸ್ಯರು, ವಿವಿಧ ಗ್ರಾಮಗಳ ಗ್ರಾಮಸ್ಥರೊಂದಿಗೆ ಭೇಟಿ ನೀಡಿದ ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ ಅವರು, ಅಲ್ಲಿ ಕೈಗೊಂಡಿರುವ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು.
ಭಕ್ತರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಗಣೇಶ ವಿಗ್ರಹವನ್ನು ವಿಸರ್ಜಿಸಲು ಮನವಿ ಮಾಡಲಾಗಿದೆ. ಈ ಸಂದರ್ಭದಲ್ಲಿ ಕಾಕತಿ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ ನಾಯಕ್, ಪಿಡಿಒ ಗೋಪಾಲ್ ನಾಯಕ್, ಗ್ರಾಪಂ ಸದಸ್ಯ ಚೇತಕ್ ಕಾಂಬಳೆ, ಗಣಪತಿ ಸುತಾರ್, ಸಿದಪ್ಪ ಮಲಗಿ, ದೇವಸ್ಥಾನ ಪಂಚ ಕಮಿಟಿ ಅಧ್ಯಕ್ಷ ಚಂದ್ರಕಾಂತ್ ಧುಡೂಮ್, ಉಮೇಶ್ ಚೌಗುಲೆ, ಕಲ್ಲಪ ಚೌಗುಲೆ, ಅನಿಲ್ ಪವಶೆ ರಾಹುಲ್ ಜಾಧವ್, ವಿಷ್ಣು ಕೊಚೇರಿ, ತುಕಾರಾಂ ಚೌಗುಲೆ, ದುರ್ಗಾಮ ಪಾಟೀಲ್, ವಿಕ್ರಮ್ ಚೌಗುಲೆ, ರೂಪೇಶ್ ಚೌಗುಲೆ, ವಿನಾಯಕ ಚೌಗುಲೆ ಮತ್ತು ವಿವಿಧ ಗ್ರಾಮಸ್ಥರು ಉಪಸ್ಥಿತರಿದ್ದರು.
ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ ಮಾತನಾಡಿ, ಅಳತಗಾ ಗ್ರಾಮದ ಮಾರ್ಕಂಡೇಯ ನದಿಯ ಸೇತುವೆ ಮೇಲೆ ಪ್ರತಿವರ್ಷ ಗಣೇಶ ವಿಸರ್ಜನೆ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ಅಡಚಣೆ ಆಗಬಾರದು ಎಂದು ಗ್ರಾಪಂನವರು ಕಾಕತಿ ಪೊಲೀಸರ ಮಾರ್ಗದರ್ಶನದಲ್ಲಿ ಸೇತುವೆಯ ಅಕ್ಕ-ಪಕ್ಕ ಗಣೇಶ ಮೂರ್ತಿಗಳ ವಿಸರ್ಜನೆಗೆ ಆಗಮಿಸುವ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಗ್ರಾಮ ಪಂಚಾಯತಿಯವರು ಸ್ವಚ್ಛತೆ ಮತ್ತು ಸೂಕ್ತ ವಿದ್ಯುತ್ ವ್ಯವಸ್ಥೆ ಕಲ್ಪಿಸಿದ್ದಾರೆ. ಸಾರ್ವಜನಿಕರು ಇಲ್ಲಿಗೆ ಆಗಮಿಸಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಅಳತಗಾ ಗ್ರಾಮಸ್ಥರೊಬ್ಬರು ಮಾತನಾಡಿ, ಅಳತಗಾ, ಕಂಗ್ರಾಳಿ, ಜಾಫರವಾಡಿ, ಅಗಸಗಾ ಗ್ರಾಮಗಳ ಸಾರ್ವಜನಿಕ ಮತ್ತು ಮನೆಗಳಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಅಳತಗಾ ಸೇತುವೆ ಮೇಲೆ ವಿಸರ್ಜನೆ ಮಾಡುತ್ತಾರೆ. ಸಚಿವ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು.

Spread the love

About Laxminews 24x7

Check Also

ಚಿನ್ನಯ್ಯನಿಗೆ ಎಸ್​ಐಟಿ ಗ್ರಿಲ್: ‘ಬುರುಡೆ’ ಕೊಟ್ಟಿದ್ದೇ ಜಯಂತ್! ಮತ್ತಷ್ಟು ಸ್ಫೋಟಕ ಸಂಗತಿ ಬಹಿರಂಗ

Spread the loveಬೆಂಗಳೂರು, ಸೆಪ್ಟೆಂಬರ್ 1: ಧರ್ಮಸ್ಥಳ (Dharmasthala) ಪ್ರಕರಣದಲ್ಲಿ ‘ಬುರುಡೆ ಗ್ಯಾಂಗ್‌’ನ ಬುರುಡೆಯಾಟ ಬಗೆದಷ್ಟು ಬಯಲಾಗುತ್ತಿದೆ. ಬೆಂಗಳೂರಿನ ಬಾಗಲುಗುಂಟೆ ಜಯಂತ್‌ ಮನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ