Breaking News

ನಗರ ಪೊಲೀಸರು ಮಾಡಿರುವ ಹೋಸ ರೂಲ್ಸ್ ಗೆ ಬಿಜೆಪಿ ಶಾಸಕ ಅಭಯ ಪಾಟೀಲ್ ಅವರು ಕೆರಳಿದ್ದಾರೆ.

Spread the love

ಬೆಳಗಾವಿ: ಬೆಳಗಾವಿ ನಗರದಲ್ಲಿ ಅದ್ಧೂರಿಯಾಗಿ ಗಣೇಶೋತ್ಸವ ವಿಸರ್ಜನೆ ನಡೆಯಲಿದ್ದು, ನಗರ ಪೊಲೀಸರು ಮಾಡಿರುವ ಹೋಸ ರೂಲ್ಸ್ ಗೆ ಬಿಜೆಪಿ ಶಾಸಕ ಅಭಯ ಪಾಟೀಲ್ ಅವರು ಕೆರಳಿದ್ದಾರೆ.

ಇಂದು ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಅವರ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗಣೇಶ ವಿಸರ್ಜನೆ ಮೆರವಣಿಗೆಯ ಸಮಯದಲ್ಲಿ ಪೊಲೀಸ್‌ ಇಲಾಖೆ ಹಾಕಿರುವ ಹೊಸ ಷರತ್ತುಗಳ ಬಗ್ಗೆ ಗಣೇಶ ಮಂಡಳಗಳ ಪದಾಧಿಕಾರಿಗಳ ಭಾವನೆಗಳನ್ನು ಕಮೀಷನ‌ರ್ ಅವರೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ತಿಳಿಸಿದರು

ಮುಂದುವರೆದು ಮಾತನಾಡಿದ ಅವರು, ಈ ಹಿಂದೆ ಅಧಿಕಾರಿಗಳ ಹಾಗೂ ಗಣೇಶೋತ್ಸವ ಮಂಡಳಗಳ ಪದಾಧಿಕಾರಿಗಳ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಹೊಸ ಹೊಸ ಖಂಡೀಷನ್ ಗಳನ್ನು ಹಾಕಲಾಗಿದೆ. ಬೆಳಗಾವಿಯಲ್ಲಿ ಈ ತರ ಹೊಸ ಖಂಡೀಷನ್ ಗಳು ಬೇಡ. 40 ಗಣೇಶ ಮಂಡಳಗಳ ಮಾರ್ಗ ಬದಲಾವಣೆ, ಪಟಾಕಿ ಹಾರಿಸಬೇಡಿ, ಹಾರಿಸಿದರೆ ಕೇಸ್ ಹಾಕುತ್ತೇವೆ. ವಾಧ್ಯಮೇಳಗಳು ಬ್ಯಾಂಕ್ ಆಫ್ ಇಂಡಿಯಾತನಕ ತಂದು ಅಲ್ಲಿಂದ ನಡೆದುಕೊಂಡು ಹೋಗಬೇಕು ಎನ್ನುವ ರಿಸ್ಟ್ರಿಕ್ಷನ್ ಹಾಕಲಾಗಿದೆ ಎಂದು ಆಕ್ರೋಶ ಹೊರ ಹಾಕಿದ್ರು.‌

ಯಾವುದೇ ಘಟನೆಗಳು ಸಂಭವಿಸಿದರೆ ನೀವೆ ಹೊಣೆಗಾರರು ಎಂದು ಖಾಲಿ ಬಾಂಡ್ ಪೇಪರ್ ಮೇಲೆ ಬರೆಸಿದ್ದಾರೆ. ಇತ್ತೀಚೆಗೆ ಒಂದು ಸಭೆ ನಡೆಯಿತು ನಿಮ್ಮಗೆ ಈ ಎಲ್ಲಾ ಖಂಡಿಶೇನ್ ಒಪ್ಪಿಗೆಯಾದರೆ ನಮ್ಮಗೂ ಅಂಭ್ಯತರವಿಲ್ಲ. ಯಾರಿಗೆ ಒಪ್ಪಿಗೆ ಇದೆ ಅವರು ಅದನ್ನು ಫಾಲೋ ಮಾಡಿ, ಯಾರಿಗೆ ಒಪ್ಪಿಗೆ ಇಲ್ಲ ಅದರ ಬಗ್ಗೆ ಸಂಬಂಧಿಸಿದವರ ಗಮನಕ್ಕೆ ತರುತ್ತೇವೆ. 


Spread the love

About Laxminews 24x7

Check Also

ಹಣಮಾಪುರ (ಕೌಲಗುಡ್ಡ) ನಲ್ಲಿ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಸತೀಶ ಜಾರಕಿಹೊಳಿ.

Spread the loveಅಥಣಿ ಸಮೀಪದ ಹಣಮಾಪುರ (ಕೌಲಗುಡ್ಡ) ನಲ್ಲಿ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಪ್ರವಚನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ