Breaking News

ಗೊಂದಲದ ಮಧ್ಯೆಯೂ ಗುಡ್ ನ್ಯೂಸ್ ನೀಡಿದ ಪೊಲೀಸರು

Spread the love

ಬೆಳಗಾವಿಯ ಜಿಲ್ಲೆಯಲ್ಲಿ ಅದ್ಧೂರಿ ಗಣೇಶೋತ್ಸವ ನಡೆಯುತ್ತಿದ್ದು, ನಾಳೆ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದೆ.

ಮೆರವಣಿಗೆ ಸಂಬಂಧ ಪೊಲೀಸರು ನೀಡಿದ ಸೂಚನೆಗಳಿಗೆ ಅನೇಕರು ಆಕ್ಷೇಪ ವ್ಯಾಕ್ತಪಡಿಸಿದ್ದರಿಂದ ಕೆಲವು ಗೊಂದಲಗಳು ನಿರ್ಮಾಣಗೊಂಡಿವೆ. ಸಾಸಕ ಅಭಯ ಪಾಟೀಲ ಕೂಡ ಪೊಲೀಸರ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಸಾರ್ವಜನಿಕರಿಗೆ ಪೊಲೀಸರು ಗುಡ್ ನ್ಯೂಸ್ ನೀಡಿದ್ದಾರೆ. ಶುಕ್ರವಾರ ಮತ್ತು ಶನಿವಾರ ಸಂಜೆ ಗಣೇಶ ಹಬ್ಬ ನೋಡಲು ಜನದಟ್ಟಣೆ ಹೆಚ್ಚಾಗಿರುವುದರಿಂದ, ಆಹಾರ ಮತ್ತು ಪಾನೀಯ ಅಂಗಡಿಗಳು ಸಂಪೂರ್ಣ ತೆರೆದಿರುತ್ತವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಜನದಟ್ಟಣೆ ಹೆಚ್ಚಿರುವುದರಿಂದ ಇಂದು ಹಾಗೂ ನಾಳೆ ತಡರಾತ್ರಿವರೆಗೂ ಆಹಾರ ಹಾಗೂ ಅಗತ್ಯ ಪಾನೀಯ ಅಂಗಡಿಗಳು ತೆರೆದಿರಲಿವೆ. ಪೊಲೀಸರು ತಡರಾತ್ರಿವರೆಗೂ ಅಂಗಡಿ ತೆರೆಯಲು ಅವಕಾಶ ನೀಡಿದ್ದಾರೆ. ಅಂಗಡಿ ಮುಚ್ಚುವಂತೆ ಬಲವಂತ ಮಾಡುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಇದರಿಂದಾಗಿ ಗಣೇಶ ಮೆರವಣಿಗೆ ನೊಡಲು ಹಳ್ಳಿ ಹಳ್ಳಿಗಳಿಂದ, ಬೇರೆ ಬೇರೆ ಜಿಲ್ಲಾಗಳಿಂದ ಆಗಮಿಸುವ ಸಾರ್ವಜನಿಕರು ಆಹಾರಕ್ಕಾಗಿ ಪರದಾಡಬೇಕಾಗಿಲ್ಲ. ರಾತ್ರಿಯಿಡೀ ಆಹಾರ ಲಭ್ಯವಾಗಲಿವೆ.

ಪೊಲೀಸ್ ಆಯುಕ್ತರ ಪ್ರಕಟಣೆ ಹೀಗಿದೆ:

Dear Friends

Today and tomorrow evening, as there will be huge rush of people to see Ganesh Festival, food and beverage shops can remain open as long as people are there.

Police will not close these shops late night

This information may please be conveyed to public.

Thank you

Regards


Spread the love

About Laxminews 24x7

Check Also

ಜಿಎಸ್​ಟಿ ದರ ಇಳಿಕೆಯಿಂದ ಜನರಿಗೆ ಅನುಕೂಲ, ರಾಜ್ಯಗಳಿಗೆ ನಷ್ಟ: ಸಚಿವ ರಾಮಲಿಂಗಾರೆಡ್ಡಿ

Spread the loveಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್​ಟಿ ವ್ಯವಸ್ಥೆ ಜಾರಿಗೆ ತಂದು ಜನರಿಗೆ ಸಾಕಷ್ಟು ಹೊರೆ ಮಾಡಿದ್ದರು. ಬಡವರು, ಮಧ್ಯಮವರ್ಗದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ