Breaking News

ರಾಜವಂಶಸ್ಥರಿಂದ ನವರಾತ್ರಿ ಧಾರ್ಮಿಕ ಕಾರ್ಯ: 5 ದಿನಗಳ ಕಾಲ ಅರಮನೆಗೆ ಪ್ರವಾಸಿಗರ ನಿರ್ಬಂಧ

Spread the love

ಮೈಸೂರು: ನವರಾತ್ರಿ ಹಿನ್ನೆಲೆ ಮೈಸೂರು ಅರಮನೆಯ ಒಳಗಡೆ ರಾಜ ವಂಶಸ್ಥರು ಧಾರ್ಮಿಕ ಕಾರ್ಯಗಳನ್ನು ಮಾಡುತ್ತಾರೆ. ಈ ನಿಮಿತ್ತ 5 ದಿನಗಳ ಕಾಲ ಅರಮನೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ಸೆ.16ರ ಬೆಳಗ್ಗೆ 8.30 ರಿಂದ 1 ರವರೆಗೆ ಸಿಂಹಾಸನ ಜೋಡಣೆ, ಸೆ.22 ರಂದು ಬೆಳಗ್ಗೆಯಿಂದ 2 ಗಂಟೆಯವರೆಗೆ ಖಾಸಗಿ ದರ್ಬಾರ್ ಹಾಗೂ ಧಾರ್ಮಿಕ ಪೂಜಾ ಕಾರ್ಯಕ್ರಮಗಳ ನಿಮಿತ್ತ, ಅ. 1 ಆಯುಧ ಪೂಜೆ, ಅ. 2 ವಿಜಯದಶಮಿ ದಿನ ಪೂರ್ತಿ ಅರಮನೆಗೆ ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಜೊತೆಗೆ ಅ. 31 ರಂದು ಬೆಳಗ್ಗೆಯಿಂದ 12 ಗಂಟೆಯವರೆಗೆ ಸಿಂಹಾಸನ ವಿಸರ್ಜನೆ ನಿಮಿತ್ತ ಈ 5 ದಿನಗಳ ಕಾಲ ಅರಮನೆಗೆ ಪ್ರವಾಸಿಗರಿಗೆ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ.

ಮೈಸೂರಿನಲ್ಲಿ ದಸರಾ ಕಾರ್ಯಕ್ರಮಗಳು ಭರದಿಂದ ಸಾಗಿದ್ದು, ಈ ಮಧ್ಯೆ ಅರಮನೆಯ ರಾಜವಂಶಸ್ಥರು ನಡೆಸುವ ಶರನ್ನವರಾತ್ರಿಯ ಸಾಂಪ್ರದಾಯಿಕ ದಸರಾ ಪೂಜೆಗಳಿಗೂ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 5 ದಿನಗಳ ಕಾಲ ಅರಮನೆಗೆ ಪ್ರವಾಸಿಗರಿಗೆ ನಿರ್ಬಂಧದ ಜೊತೆಗೆ ಸೆ.15 ರಿಂದ ಅ.12 ರವರೆಗೆ ಅರಮನೆಯಲ್ಲಿ ನಡೆಯುವ ಧ್ವನಿ ಬೆಳಕು ಕಾರ್ಯಕ್ರಮ ಕೂಡ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ.

ಸೆ.16 ರಂದು ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್​ನಲ್ಲಿ ರತ್ನ ಖಚಿತ ಸಿಂಹಾಸನ ಜೋಡಣೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸೆ.16 ರ ಬೆಳಗ್ಗೆ 8.30 ರಿಂದ 1 ಗಂಟೆಯವರೆಗೆ ಅರಮನೆಗೆ ಪ್ರವಾಸಿಗರ ನಿರ್ಬಂಧ ಇರಲಿದ್ದು, 1 ಗಂಟೆಯ ನಂತರ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಅರಮನೆಯ ವೀಕ್ಷಣೆಗೆ ಅವಕಾಶವಿರುತ್ತದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ