ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ಸ್ ಅಸೋಸಿಯೇಷನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿಯಲ್ಲಿ ರಾಜ್ಯದ ಮೊದಲ ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ಸ್ ಅಸೋಸಿಯೇಷನ್ ಲೋಗೋ ಬಿಡುಗಡೆ ಮಾಡೋ ಮೂಲಕ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು.
ನಂತರ ಎಲೆಕ್ಟ್ರಾನಿಕ್ ಮೀಡಿಯಾದವರಂತೆ ಸಚಿವ ಸಂತೋಷ ಲಾಡ್ ಕ್ಯಾಮರಾ ಮ್ಯಾನ್ ಆದ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಚಿಟ್ಚಾಟ್ ಮಾಡಿರುವ ಒಂದು ಅದ್ಭುತ ಸಂದರ್ಭ ಹುಬ್ಬಳ್ಳಿಯಲ್ಲಿ ನಡೆದಿದೆ.
ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟನೆಗೆ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು KEMJA ಲೋಗೊ ಬಿಡುಗಡೆ ಮಾಡಿದಾಗ. ಸಚಿವ ಸಂತೋಷ ಲಾಡ್ ಕ್ಯಾಮರಾಮ್ಯಾನ್
ಆದ್ರು, ಸಭಾಪತಿ ಬಸವರಾಜ ಹೊರಟ್ಟಿ, ಮತ್ತು ಶಾಸಕ ಮಹೇಶ್ ಟೆಂಗಿನಕಾಯಿ ಅವರು ರಿಪೋರ್ಟರ್ ಆಗಿ ಪ್ರಶ್ನೆ ಕೇಳಿದ್ರೂ. ಆಗ ಅದೇ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡಬೇಕಾದ್ರೆ ಸಚಿವ ಸಂತೋಷ ಲಾಡ್ ಕ್ಯಾಮರಾ ಹಿಡಿದು ಕ್ಯಾಪ್ಟರ್ ಮಾಡಿದರು.
ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಪ್ರಸಾದ ಅಬ್ಬಯ್ಯ, ಎನ್.ಹೆಚ್ ಕೋನರೆಡ್ಡಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.
Laxmi News 24×7