ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಪ್ರತಿಭಟನೆ
ಚಿಕ್ಕೋಡಿ: ತಾಲೂಕಿನ ಕೇರೂರ ಗ್ರಾಮದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ “ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಕೇರೂರ ಗ್ರಾಮ ಪಂಚಾಯತ ಮುಂದೆ ಪ್ರತಿಭಟನೆ ನಡೆಯಿತು.
ಕಳೆದ 19 ವರ್ಷಗಳ ಹಿಂದೆ ಸುಮಾರು 184 ಕ್ಕೂ ಹೆಚ್ಚು ಜನರಿಗೆ ಹಕ್ಕು ಪತ್ರ ನೀಡಿಲಾಗಿತ್ತು.ಆದ್ರೆ ಇನ್ನೂವರೆಗೆ ಜಾಗ ನೀಡಿಲ್ಲ,ಜಾಗ ನೀಡುವಂತೆ ಪ್ರತಿಭಟನೆಗಾರರು ಆಗ್ರಹಿಸಿದರು.
ಇನ್ನೂ ಪ್ರತಿಭಟನಾ ಸ್ಥಳಕ್ಕೆ ಚಿಕ್ಕೋಡಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕೆ. ಎ. ವಣ್ಣೂರ ಆಗಮಿಸಿ ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಗಾರರು ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡರು.
ಬಳಿಕ ಕರ್ನಾಟಕ ಭೀಮ ರಕ್ಷಕ ಸಂಘಟನೆಯ ಅಧ್ಯಕ್ಷರಾದ ಈಶ್ವರ ಗುಡಾಜ ಅವರು ಮಾತನಾಡಿ ಒಂದು ವಾರದಲ್ಲಿ ಫಲಾನುಭವಿಗಳಿಗೆ ಭೂಮಿ ಕೂಡದೆ ಇದ್ದಲಿ ಉಗ್ರವಾದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆಯನ್ನು
ಈ ಸಂಧರ್ಭದಲ್ಲಿ ಯುವರಾಜ ಕಾಂಬಳೆ,ಮಂಜುನಾಥ ಪರಗೌಡಕೃಷ್ಣಾ ಕೆಂಚನ್ನವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Laxmi News 24×7