Breaking News

ಜಿಲ್ಲಾ ದಸರಾ ಕೈ ಬಿಟ್ಟ ಸರ್ಕಾರ: ಕನ್ನಡ ಸಂಘದಿಂದಲೇ 9 ದಿನ ಅದ್ಧೂರಿ ಚಾಮರಾಜನಗರ ದಸರಾ

Spread the love

ಚಾಮರಾಜನಗರ: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಯುಕ್ತ ಚಾಮರಾಜನಗರದಲ್ಲಿ ಮೂರು ದಿನಗಳ ಕಾಲ ನಡೆಸುತ್ತಿದ್ದ ಚಾಮರಾಜನಗರ ದಸರಾವನ್ನು ಈ ಬಾರಿ ಕೈ ಬಿಟ್ಟಿದ್ದು, ಸಿಎಂ ಸಿದ್ದರಾಮಯ್ಯ ಅವರೇ ಚಾಮರಾಜನಗರದಲ್ಲಿ ದಸರಾ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಇದರಿಂದ ಅಸಮಾಧಾನಗೊಂಡ ಕನ್ನಡಪರ ಹೋರಾಟಗಾರರು ಚಾಮರಾಜನಗರ ದಸರಾ ಮಾಡಲು ಮುಂದಾಗಿದ್ದಾರೆ.

ಹೌದು, ಸರ್ಕಾರ ಜಿಲ್ಲಾ ದಸರಾ ಆಚರಣೆ ಕೈ ಬಿಟ್ಟ ಹಿನ್ನೆಲೆ ಕನ್ನಡಪರ ಹೋರಾಟಗಾರ ಚಾ.ರಂ. ಶ್ರೀನಿವಾಸಗೌಡ ನೇತೃತ್ವದಲ್ಲಿ ಚಾಮರಾಜನಗರ ದಸರಾ ಆಚರಣೆ ಮಾಡಲು ಸಿದ್ದತೆ ಮಾಡಿಕೊಂಡಿದ್ದು ಚಾಮರಾಜೇಶ್ವರ ದೇಗುಲ ಮುಂಭಾಗ ಪ್ರತಿದಿನ ಸಂಜೆ 6 ರಿಂದ ರಾತ್ರಿ 9ರ ತನಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಈ ಸಂಬಂಧ, ಕಳೆದ ಶುಕ್ರವಾರ ಹೋರಾಟಗಾರರು, ಕಲಾವಿದರು, ಚಿಂತಕರು ಪೋಸ್ಟರ್​ ಕೂಡ ಬಿಡುಗಡೆ ಮಾಡಿ ಸರ್ಕಾರಕ್ಕೆ ಸಡ್ಡು ಹೊಡೆದಿದ್ದರು.


Spread the love

About Laxminews 24x7

Check Also

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು.

Spread the love BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ