Breaking News

ಡಿಸಿಎಂ ಡಿ.ಕೆ.ಶಿವಕುಮಾರ್​ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್​ ತಿಳಿಸಿದೆ.

Spread the love

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ವಾಪಸ್​ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್​ ಸೋಮವಾರ ತಿಳಿಸಿದೆ.

ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವರು ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರ ನೇತೃತ್ವದ ಪೀಠವು ಇಂದು ಇವುಗಳ ವಿಚಾರಣೆ ನಡೆಸಿತು.

ಇದೇ ಪ್ರಕರಣವನ್ನು ಈ ಹಿಂದೆ ನ್ಯಾಯಮೂರ್ತಿ ಸೂರ್ಯಕಾಂತ್​ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿತ್ತು. ಈಗ ಅವರ ಪೀಠಕ್ಕೆ ವಿಚಾರಣೆ ನಡೆಸುವಂತೆ ಅರ್ಜಿಗಳನ್ನು ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್​ ತಿಳಿಸಿತು.

ಈ ವೇಳೆ ಡಿ.ಕೆ.ಶಿವಕುಮಾರ್​ ಅವರ ಪರ ಹಿರಿಯ ವಕೀಲರಾದ ಅಭಿಷೇಕ್ ಎಂ. ಸಿಂಘ್ವಿ ಅವರು, ರಾಜಕೀಯ ವಿಷಯಗಳು ಕೋರ್ಟಿನ ಆಚೆಗೆ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಎಂದು ಸಿಜೆಐ ಈ ಹಿಂದೆ ಹೇಳಿದ್ದರು ಎಂದು ಪೀಠದ ಗಮನಕ್ಕೆ ತಂದರು.

ಆದರೆ, ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಅರ್ಜಿಗಳನ್ನು ವಿಚಾರಣೆ ನಡೆಸುವುದು ನ್ಯಾಯದ ದೃಷ್ಟಿಯಿಂದ ಒಳಿತು ಎಂದು ಸಿಜೆಐ ಗವಾಯಿ ನೇತೃತ್ವದ ಪೀಠ ಅಭಿಪ್ರಾಯಪಟ್ಟಿತು. ಜೊತೆಗೆ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಈ ಹಿಂದೆಯೂ ಈ ವಿಷಯವನ್ನು ವಿಚಾರಣೆ ನಡೆಸಿದ್ದರು ಎಂದಿತು.


Spread the love

About Laxminews 24x7

Check Also

25 ಸಾವಿರ ಲಂಚ ಪಡೆದು ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ  ಸಿಕ್ಕಿಬಿದ್ದ ಪಿಡಿಓ

Spread the loveಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ