Breaking News

ಹಪ್ತಾ ಕೊಡದೇ ಇದ್ದಿದ್ದಕ್ಕೆ ಮಾಜಿ ಸೈನಿಕನ ಮೇಲೆ ಹಲ್ಲೆ; ಧಾರವಾಡ ಪೊಲಿಸರ ಮೇಲೆ ಗಂಭೀರ ಆರೋಪ

Spread the love

ಧಾರವಾಡ, ಸೆಪ್ಟೆಂಬರ್ 29:  ಸೇನೆಯಿಂದ ನಿವೃತ್ತಿಹೊಂದಿದ್ದ ಸೈನಿಕರೊಬ್ಬರು  ಧಾರವಾಡದಲ್ಲಿ ವಿದ್ಯಾರ್ಥಿಗಳಿಗಾಗಿ ಪಿಜಿ ಮತ್ತು ಮೆಸ್ ನಡೆಸುತ್ತಿದ್ದರು. ಕಡಿಮೆ ದರದಲ್ಲಿ ಊಟ, ವಸತಿ ಕೊಡುತ್ತಿದ್ದರು.  ಆದರೆ ಅವರ ಮೇಲೆ ಕಳೆದ ರಾತ್ರಿ ಅಟ್ಯಾಕ್ ಆಗಿದ್ದು, ಎಂಟರಿಂದ ಹತ್ತು ಜನ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಕೃತ್ಯ ಎಸಗಿದವರು ಸ್ವತಃ ಪೊಲೀಸರೇ.  ಹಪ್ತಾ ಕೊಡದೇ ಇದ್ದಿದ್ದಕ್ಕೆ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಮಾಜಿ ಸೈನಿಕ ಆರೋಪ ಮಾಡಿದ್ದಾರೆ.

ಮಾಜಿ ಸೈನಿಕನ ಮೇಲೆ ಪೊಲೀಸರಿಂದ ದುಂಡಾವರ್ತನೆ ಆರೋಪ

ದೇಶ ಸೇವೆ ಮಾಡಿ ನಿವೃತ್ತಿಯಾದ ನಂತರ ರಾಮಪ್ಪ ನಿಪ್ಪಾಣಿ, ಧಾರವಾಡದ ಸಪ್ತಾಪುರ ಬಾವಿ ಬಳಿ ಪಿಜಿ ಮತ್ತು ಮೆಸ್ ನಡೆಸಿಕೊಂಡು ಜೀವನ ನಡೆಸುತ್ತಿದ್ದರು. ಕಡಿಮೆ ದರಕ್ಕೆ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಿದ್ದರಿಂದ ಹೆಚ್ಚಿನ ವಿದ್ಯಾರ್ಥಿಗಳು ಇಲ್ಲಿ ಊಟಕ್ಕೆ ಬರುತ್ತಿದ್ದರು. ಆದರೆ ಕಳೆದ ರಾತ್ರಿ (ಸೆ.28)  ಹನ್ನೊಂದು ಗಂಟೆ ಸಮಯದ್ಲಲಿ ಸಪ್ತಾಪುರ ಬಾವಿ ಬಳೀಯಿರುವ ಸೈನಿಕ್ ಮೆಸ್​ಗೆ ಆಗಮಿಸಿದ್ದ ಧಾರವಾಡ ಉಪನಗರ ಠಾಣೆಯ ಪೊಲೀಸರು ಮೆಸ್ ಗೇಟ್ ಹಾಕುವಂತೆ ರಾಮಪ್ಪಗೆ ಹೇಳಿದ್ದಾರೆ.

ಇನ್ನೂ ನಾಲ್ಕೈದು ವಿದ್ಯಾರ್ಥಿಗಳು ಊಟಕ್ಕೆ ಬರುವವರಿದ್ದಾರೆ ಸರ್ ಎಂದು ಹೇಳಿದ್ದಾರೆ. ಇದೇ ವಿಚಾರಕ್ಕೆ ಪೊಲೀಸರು ಮತ್ತು ರಾಮಪ್ಪನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಮಯದಲ್ಲಿ ರಾಮಪ್ಪ ನಿಪ್ಪಾಣಿ ಮೇಲೆ ಉಪನಗರ ಠಾಣೆಯ ಎಂಟರಿಂದ ಹತ್ತು ಪೊಲೀಸರು ಹೆಲ್ಮೆಟ್ ಸೇರಿದಂತೆ ಅನೇಕ ವಸ್ತುಗಳಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ರಾಮಪ್ಪಗೆ ಥಳಿಸಿದ್ದಲ್ಲದೇ, ಮೆಸ್​ನಲ್ಲಿ ಕೆಲಸ ಮಾಡುತ್ತಿದ್ದ ಹುಡುಗರಿಗೆ ಕೂಡಾ ಥಳಿಸಿದ್ದಾರೆ. ಮೆಸ್ನಲ್ಲಿರುವ ಟೇಬಲ್, ಕುರ್ಚಿಗಳನ್ನು ಮುರಿದು, ನಂತರ ಮೆಸ್ನಲ್ಲಿದ್ದ ಸಿಸಿಟಿವಿ ಫುಟೇಜ್, ಮೊಬೈಲ್​ಗಳನ್ನು ತಗೆದುಕೊಂಡು ಹೋಗಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ