ರಾಮತೀರ್ಥನಗರದಲ್ಲಿ ರಸ್ತ ಅಭಿವೃದ್ಧಿಗೆ ಶಾಸಕ ಆಸೀಫ್ ಸೇಠ್…ಶಾಸಕ ಆಸೀಫ್ ಸೇಠ್ ಅವರಿಂದ ಭೂಮಿಪೂಜೆ
ಜನರಿಂದ ಶಾಸಕರ ಕಾರ್ಯಕ್ಕೆ ಪ್ರಶಂಸೆಹಲವು ದಿನಗಳ ಬೇಡಿಕೆ ಈಡೇರಿಕೆ
ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ಆಸೀಫ್ ಸೇಠ್ ಅವರು ರಾಮತೀರ್ಥ ನಗರದಲ್ಲಿ ಹೊಸ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಈ ಮೂಲಕ ಶಾಸಕ ಆಸೀಫ್ ಸೇಠ್ ಕ್ಷೇತ್ರದಲ್ಲಿ ನಾಗರಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ ಹಾಕಿದ್ದಾರೆ. ಕಾಮಗಾರಿಯ ಸಂದರ್ಭ ಶಾಸಕರು ಸ್ಥಳೀಯ ನಿವಾಸಿಗಳ ಜೊತೆ ಸಂವಾದ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿ, ಭವಿಷ್ಯದಲ್ಲಿಯೂ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗುತ್ತದೆ ಎಂಬ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಯುವ ನಾಯಕ ಅಮಾನ್ ಸೇಠ್ ಸ್ಥಳೀಯ ಮುಖಂಡರು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದು, ಕಾಮಗಾರಿಯ ಯೋಜನೆಗಳನ್ನು ಪರಿಶೀಲಿಸಿ, ಸಮಯಕ್ಕೆ ಸರಿಯಾಗಿ ಕಾರ್ಯ ಅನುಷ್ಠಾನಗೊಳಿಸುವ ಬಗ್ಗೆ ಚರ್ಚೆ ನಡೆಸಿದರು.
ಸ್ಥಳೀಯರು ಶಾಸಕರ ಈ ಕಾರ್ಯಕ್ಕೆ ಅಭಿನಂದನೆ ವ್ಯಕ್ತಪಡಿಸಿದ್ದು, ಹೊಸ ರಸ್ತೆ ಅಭಿವೃದ್ಧಿಯಿಂದ ಸಂಪರ್ಕ ಸುಧಾರಣೆಯಾಗಲಿದ್ದು, ಜನರು ಸಂತಸ ವ್ಯಕ್ತಪಡಿಸಿದ್ದಾರೆ.
Laxmi News 24×7