Breaking News

5 ನಗರ ಪಾಲಿಕೆಗಳ ಕ್ಷೇತ್ರ ಪುನರ್ವಿಂಗಡನೆ ಕರಡು ಅಧಿಸೂಚನೆ ಪ್ರಕಟ, ಆಕ್ಷೇಪಣೆಗೆ 15 ದಿನ ಕಾಲಾವಕಾಶ

Spread the love

ಬೆಂಗಳೂರು: ಬೆಂಗಳೂರಿನ ಐದು ಹೊಸ ನಗರ ಪಾಲಿಕೆಗಳ ಕರಡು ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆ ಪ್ರಕಟಿಸಲಾಗಿದ್ದು, ನಾಗರಿಕರಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಆಹ್ವಾನಿಸಿದೆ.

ಐದು ಪಾಲಿಕೆಗಳಾಗಿ ವಿಂಗಡಣೆ: ಸರ್ಕಾರ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನೂತನವಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಪೂರ್ವ ನಗರ ಪಾಲಿಕೆ, ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳನ್ನು ರಚಿಸಿದೆ. ಈ ಸಂಬಂಧ ವಾರ್ಡ್‌ಗಳ ಪುನರ್ ವಿಂಗಡಣೆಗಾಗಿ 3 ತಿಂಗಳ ಅವಧಿಗೆ ಸೀಮಿತವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ವಾರ್ಡ್‌ಗಳ ಪುನರ್ ವಿಂಗಡಣಾ ಆಯೋಗವನ್ನು ರಚಿಸಲಾಗಿತ್ತು.

ಸರ್ಕಾರಕ್ಕೆ ವಾರ್ಡ್‌ಗಳ ಪುನರ್ ವಿಂಗಡಣಾ ವರದಿ ಸಲ್ಲಿಕೆ: ಇದರ ಜೊತೆಗೆ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಬೆಂಗಳೂರು ನಗರ ಪಾಲಿಕೆಗಳಿಗೆ ಸಂಬಂಧಿಸಿದಂತೆ ವಾರ್ಡ್‌ ಗಳ ಪುನರ್‌ವಿಂಗಡಣೆಯನ್ನು ಮಾಡಲು ಮಾರ್ಗಸೂಚಿಗಳನ್ನು ರಚಿಸಲಾಗಿತ್ತು. ಅದರಂತೆ, ವಾರ್ಡ್‌ಗಳ ಪುನರ್ ವಿಂಗಡಣಾ ಆಯೋಗ 30-09-2025ರಂದು ಸರ್ಕಾರಕ್ಕೆ ವಾರ್ಡ್‌ಗಳ ಪುನರ್ ವಿಂಗಡಣಾ ವರದಿಯನ್ನು ಸಲ್ಲಿಸಿದೆ. ಸರ್ಕಾರ ವಾರ್ಡ್‌ಗಳ ಪುನರ್ ವಿಂಗಡಣಾ ಆಯೋಗದ ವರದಿಯನ್ನು ಒಪ್ಪಿ, ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ ಅನ್ವಯ 2011ರ ಜನಗಣತಿಯ ಆಧಾರದ ಮೇರೆಗೆ, ಗ್ರೇಟರ್ ಬೆಂಗಳೂರು ಪ್ರದೇಶದ 5 ನಗರ ಪಾಲಿಕೆಗಳ ಕರಡು ವಾರ್ಡ್ ವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ನಿಗದಿಪಡಿಸಿದೆ.

5 ನಗರ ಪಾಲಿಕೆಗಳ ಕರಡು ವಾರ್ಡುಗಳ ಸಂಖ್ಯೆ:

  • ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವಾರ್ಡ್ ಗಳ ಸಂಖ್ಯೆ: 63
  • ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವಾರ್ಡ್ ಗಳ ಸಂಖ್ಯೆ: 72
  • ಬೆಂಗಳೂರು ಪೂರ್ವ ನಗರ ಪಾಲಿಕೆಯ ವಾರ್ಡ್ ಗಳ ಸಂಖ್ಯೆ: 50
  • ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಾರ್ಡ್ ಗಳ ಸಂಖ್ಯೆ: 111
  • ಬೆಂಗಳೂರು ಉತ್ತರ ನಗರ ಪಾಲಿಕೆಯ ವಾರ್ಡ್ ಗಳ ಸಂಖ್ಯೆ: 72

ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ: ಕರಡು ವಾರ್ಡುವಾರು ಪುನರ್ವಿಂಗಡನೆ ಸಂಬಂಧ ಯಾವುದೇ ಆಕ್ಷೇಪಣೆ / ಸಲಹೆಗಳನ್ನು ಸಲ್ಲಿಸಲು ಇಚ್ಛಿಸುವವರು ತಮ್ಮ ಪೂರ್ಣ ವಿಳಾಸ, ಸಹಿಯೊಂದಿಗೆ ಸೂಕ್ತ ಕಾರಣ-ವಿವರಣೆಗಳೊಂದಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆ / ಸಲಹೆಗಳನ್ನು ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಕೊಠಡಿ ಸಂಖ್ಯೆ: 436, 4ನೇ ಮಹಡಿ, ವಿಕಾಸಸೌಧ, ಡಾ. ಬಿ.ಆರ್ ಅಂಬೇಡ್ಕರ್ ವೀದಿ, ಬೆಂಗಳೂರು-560001 ಇವರಿಗೆ 15-10-2025 ರಂದು ಅಪರಾಹ್ನ 5 ಗಂಟೆಯ ಒಳಗಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.

ನಿಗದಿತ ಅವಧಿಯಲ್ಲಿ ಸ್ವೀಕೃತಗೊಂಡ ಆಕ್ಷೇಪಣೆ/ಸಲಹೆಗಳನ್ನು ಪರಿಶೀಲಿಸಿ. ವಾರ್ಡ್ ವಾರು ಕ್ಷೇತ್ರ ಪುನರ್‌ವಿಂಗಡಣೆಯನ್ನು ಅಂತಿಮಗೊಳಿಸಲು ಕ್ರಮವಹಿಸಲಾಗುವುದು ಎಂದು ಕರಡು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಧಾರವಾಡ ಕೃಷಿ ವಿವಿಯಲ್ಲಿ 2018ರಿಂದ ಇಲ್ಲಿಯವರೆಗೆ ಲೆಕ್ಕಪರಿಶೋಧನೆ ನಡೆಸಲು ಸಿಎಜಿಗೆ ಹೈಕೋರ್ಟ್ ಸೂಚನೆ

Spread the loveಬೆಂಗಳೂರು: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅನರ್ಹ ವ್ಯಕ್ತಿಯೊಬ್ಬರು ಕಳೆದ 2018ರಿಂದ ಕಂಟ್ರೋಲರ್‌ ಹುದ್ದೆ ನಿರ್ವಹಿಸಿರುವ ಅಂಶವನ್ನು ಗಂಭೀರವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ