Breaking News

ಶಕ್ತಿಸೌಧದಲ್ಲಿ ಆಯುಧ ಪೂಜೆ

Spread the love

ಬೆಂಗಳೂರು: ದಸರಾ ಹಬ್ಬದ ಆಯುಧ ಪೂಜೆ ಪ್ರಯುಕ್ತ ವಿಧಾನಸೌಧ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ವಿಧಾನಸೌಧದ ಬಹುತೇಕ ಎಲ್ಲ ಕೊಠಡಿಗಳು ಹೂವಿನ ಅಲಂಕಾರ, ರಂಗೋಲಿಯೊಂದಿಗೆ ಕಳೆಗಟ್ಟಿತು.

ನಾಳೆ ಆಯುಧ ಪೂಜೆ ಪ್ರಯುಕ್ತ ಇಂದೇ ವಿಧಾನಸೌಧ, ವಿಕಾಸಸೌಧದಲ್ಲಿ ಪೂಜೆ ನೆರವೇರಿಸಲಾಯಿತು. ನಾಳೆ ಸರ್ಕಾರಿ ರಜಾ ದಿನವಾಗಿರುವುದರಿಂದ ಸಿಬ್ಬಂದಿ ಇಂದು ತಮ್ಮ ಕಚೇರಿ ಕೊಠಡಿಯಲ್ಲಿ ಆಯುಧ ಪೂಜೆ ಕೈಗೊಂಡರು.

ಬಹುತೇಕ ಎಲ್ಲ ಕೊಠಡಿ, ಸಚಿವರ ಕೊಠಡಿಯಲ್ಲಿ ಅದ್ದೂರಿಯಾಗಿ ಆಯುಧ ಪೂಜೆ ನೆರವೇರಿಸಲಾಯಿತು.ಕೊಠಡಿಗಳ ಬಾಗಿಲಿಗೆ, ಒಳಗೆ, ಹೊರಗೆ ಹೂವಿನ ಅಲಂಕಾರ, ಬಾಳೆ ದಿಂಡು, ರಂಗೋಲಿ ಹಾಕುವ ಮೂಲಕ ಹೊಸ ಸ್ಪರ್ಶ ನೀಡಲಾಗಿತ್ತು. ವಿಧಾನಸೌಧ ಹಾಗೂ ವಿಕಾಸಸೌಧದ ಕಾರಿಡಾರುಗಳು ಹೂವಿನ ಅಲಂಕಾರದೊಂದಿಗೆ ಕಳೆ ಗಟ್ಟಿತ್ತು.

ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಚೇರಿ, ಸಂಪುಟ ಸಭೆ ಸಭಾಂಗಣ, ಮುಖ್ಯ ಕಾರ್ಯದರ್ಶಿ ಕೊಠಡಿ, ಸಚಿವರುಗಳ ಕಚೇರಿಗಳನ್ನು ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಶಕ್ತಿಸೌಧದ ಕಾರಿಡಾರ್​ಗಳಲ್ಲಿ ಮಹಿಳಾ ಸಿಬ್ಬಂದಿಗಳು ರಂಗೋಲಿ ಹಾಕುತ್ತಿರುವುದು ಕಂಡು ಬಂತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ