ನೆರೆ ಸಂಕಷ್ಟಿತ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಲಿ-ಸೂಕ್ತ ತುರ್ತು ಪರಿಹಾರ ತಕ್ಷಣ ಘೋಷಿಸಲಿ”
ನೆರೆ ಪ್ರದೇಶಗಳ ಪ್ರವಾಸದ ಹಿನ್ನಲೆ ಬೈಲಹೊಂಗಲ ಕ್ಷೇತ್ರದ ನೇಸರಗಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ರೈತರ ಜಮೀನುಗಳಿಗೆ ವಿರೋಧ ಪಕ್ಷದ ನಾಯಕರಾದ ಶ್ರೀ R Ashoka ಜಿ ಅವರೊಂದಿಗೆ ಭೇಟಿ ನೀಡಿ ಬೆಳೆ ಹಾನಿಯ ಪರಿಶೀಲನೆ ನಡೆಸಿ,ರೈತರಿಗೆ ಧೈರ್ಯ ತುಂಬಲಾಯಿತು.
ನೆರೆ ಹಾವಳಿಯ ಕುರಿತು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ,ನಿರ್ಲಕ್ಷ್ಯ ತೋರಿದ ರೈತ ಕಾಳಜಿ ಇಲ್ಲದ ರಾಜ್ಯ ಸರ್ಕಾರ ಸಂಕಷ್ಟಿತ ಜನರ ಹಾಗೂ ರೈತರ ನೆರವಿಗೆ ಧಾವಿಸಿ ಶೀಘ್ರ ಪರಿಹಾರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿ.ಪ.ಸದಸ್ಯರಾದ ಶ್ರೀ ಸಿ.ಟಿ.ರವಿ,ಸಂಸದರಾದ ಶ್ರೀ ರಮೇಶ ಜಿಗಜಿಣಗಿ ಜಿ,ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ,ಹಾಲಿ ಮಾಜಿ ಶಾಸಕರು,ವಿಧಾನ ಪರಿಷತ್ ಸದಸ್ಯರು,ಪಕ್ಷದ ಪಧಾಧಿಕಾರಿಗಳು,ಜಿಲ್ಲಾಧಿಕಾರಿಗಳು,ಅಧಿಕಾರಿಗಳು,ಸ್ಥಳೀಯ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.