Breaking News

ಮುಚ್ಚುವ ಹಂತದಲ್ಲಿದ್ದ ಕಾರ್ಖಾನೆ ಕೆಲವೇ ವರ್ಷಗಳಲ್ಲಿ ಅಭಿವೃದ್ಧಿಯ ಪಥದಲ್ಲಿ

Spread the love

ನಿಪ್ಪಾಣಿ: ಮುಚ್ಚುವ ಹಂತದಲ್ಲಿದ್ದ ಕಾರ್ಖಾನೆ ಕೆಲವೇ ವರ್ಷಗಳಲ್ಲಿ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಇದಕ್ಕೆಲ್ಲ ನಮ್ಮ ಕಾರ್ಖಾನೆಯ ಸಿಬ್ಬಂದಿಯ ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮವೆ ಕಾರಣ. ಅವರೇ ನಮ್ಮ ಶಕ್ತಿ, ಅವರಿಗೆ ದಸರಾ ಮತ್ತು ದೀಪಾವಳಿ ಹಬ್ಬಕ್ಕಾಗಿ ಒಂದು ತಿಂಗಳಿನ ಬೋನಸ್ ನೀಡಲು ನಮ್ಮ ಆಡಳಿತ ಮಂಡಳಿ ತಿರ್ಮಾನಿಸಿದೆ. ಕಳೆದ ೨೫ ವರ್ಷದಲ್ಲಿ ಇದು ಗರಿಷ್ಠ ಬೋನಸ್ ಆಗಿದೆ ಎಂದು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ರವಿವಾರ ನಗರದ ಹೊರವಲಯದಲ್ಲಿರುವ ಶ್ರೀ ಹಾಲಸಿದ್ಧನಾಥ ಕೋ-ಆಪರೇಟಿವ್ ಶುಗರ್ ಫ್ಯಾಕ್ಟರಿಯ ೨೦೨೫-೨೬ ಸಾಲಿನ ಹಬೆಜನಕದ ಅಗ್ನಿಪ್ರದಿಪನ ನೇರವೇರಿಸಿ ಅವರು ಮಾತನಾಡಿದರು. ಈ ಹಂಗಾಮಿನಲ್ಲಿ ಕಾರ್ಖಾನೆಯನ್ನು ೧೨೦ ರಿಂದ ೧೫೦ ದಿನಗಳ ವರೆಗೆ ನಡೆಸುವ ಯೋಜನೆ ರೂಪಿಸಿದೆ, ಜತೆಗೆ ಪ್ರತಿದಿನ ೧೧ ಸಾವಿರ ಕಬ್ಬು ನುರಿಸಿ ೧೦ ಲಕ್ಷ ಸಕ್ಕರೆ ಚೀಲಗಳನ್ನು ಉತ್ಪಾದಿಸುವ ಗುರಿಯನ್ನು ಹೊಂದಿದೆ ಎಂದರು.
ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ಕಾರ್ಖಾನೆ ಹಂತ ಹಂತವಾಗಿ ಬೆಳೆದು ನಿಂತಿದೆ. ಸಹಕಾರಿ ವಲಯದಲ್ಲಿ ರಾಜ್ಯದ ನಂಬರ್ ೧ಕಾರ್ಖಾನೆಯಾಗಿ ಮಾಡುವುದು ನಮ್ಮ ಗುರಿಯಾಗಿದೆ. ಕಾರ್ಖಾನೆಗೆ ಹೆಚ್ಚಿನ ಕಬ್ಬು ಕಳುಹಿಸಿ ಬರುವ ಹಂಗಾಮು ಯಶಸ್ವಿಗೊಳಿಸಿ ಎಂದು ಕಬ್ಬು ಬೆಳೆಗಾರ ರೈತರಿಗೆ ಮತ್ತು ಸದಸ್ಯರಿಗೆ ಕರೆ ನೀಡಿದರು.
ದಿವ್ಯಸಾನಿಧ್ಯ ವಹಿಸಿ ನಿಡಸೋಸಿಯ ಶ್ರೀ.ಮ.ನಿ.ಪ್ರ.ಡಾ.ಶ್ರೀ. ಶಿವಲಿಂಗೇಶ್ವರ ಮಹಾಸ್ವಾಮಿಜಿ ಸ್ವಾಮಿಜಿ ಮಾತನಾಡಿ, ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಕಳೆದ ಹಲವು ವಷಗಳಿಂದಲೂ ನಾನು ಗಮನಿಸುತ್ತಿದ್ದೇನೆ, ಕಾರ್ಖಾನೆಯಲ್ಲಿ ಆಮೂಲಾಗ್ರ ಸುಧಾರಣೆಗಳೊಂದಿಗೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಎಥೆನಾಲ್ ಘಟಕದ ಜತೆಗೆ ಕಾರ್ಖಾನೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ.

ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಾಸಕಿ ಶಶಿಕಲಾ ಜೊಲ್ಲೆ ಅವರ ಮಾರ್ಗದರ್ಶನದಲ್ಲಿ ಕಾರ್ಖಾನೆ ನಿಜವಾದ ಅರ್ಥದಲ್ಲಿ ಪ್ರಗತಿಯ ದಿಕ್ಕನ್ನು ಪಡೆದಿದೆ. ಕಟ್ಟುನಿಟ್ಟಿನ ನಿರ್ವಹಣೆ ಮತ್ತು ಪ್ರಾಮಾಣಿಕ ಸೇವೆಯಿಂದ ಮಾತ್ರ ಇದು ಸಾಧ್ಯವಾಗಿದೆ. ಕಾರ್ಖಾನೆ ಈ ಭಾಗದ ಕಬ್ಬು ಬೆಳೆಗಾರ ರೈತರಿಗೆ, ಸದಸ್ಯರಿಗೆ ಹಾಗೂ ಕಾರ್ಮಿಕರಿಗೆ ವರದಾನವಾಗಿದ್ದಲ್ಲದೆ, ಅವರ ಹಿತಾಶಕ್ತಿಗಳನ್ನು ಪೋಷಿಸುವ ಕೆಲಸ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಹಕಾರಿ ಕ್ಷೇತ್ರದ ಅಗ್ರಗಣ್ಯ ಕಾರ್ಖಾನೆಯಾಗಿ ಗುರುತಿಸಲ್ಪಡಲಿ ಎಂದು ಹಾರೈಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ