Breaking News

ಕೆರೆಯ ದಂಡೆಯ ಮೇಲೆ ಹೋರಿ ಓಡಿಸೋ ಹಬ್ಬದಲ್ಲಿ ಈ ದುರ್ಘಟನೆ

Spread the love

ಹಾವೇರಿ: ಕೊಬ್ಬರಿ ಹೋರಿ ಸ್ಪರ್ಧೆಗೆ ಹಾವೇರಿ ಜಿಲ್ಲೆ ಫೇಮಸ್ಸ್. ಆದರೆ ಕೊಬ್ಬರಿ ಹೋರಿ ಅಖಾಡದಲ್ಲಿ ಮಿಂಚಿನ ಓಟ ಓಡುತ್ತಲೇ ಹೋರಿಯೊಂದು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಳಿ ಇರೋ ಕೆರೆಯ ದಂಡೆಯ ಮೇಲೆ ಹೋರಿ ಓಡಿಸೋ ಹಬ್ಬದಲ್ಲಿ ಈ ದುರ್ಘಟನೆ ನಡೆದಿದೆ. ಅರಳೀಕಟ್ಟಿ ಗ್ರಾಮದ ಪುಟ್ಟಪ್ಪ ಎಂಬವರಿಗೆ ಸೇರಿದ ವರದನಾಯಕ ಹೆಸರಿನ ಹೋರಿ ಇದಾಗಿದೆ. ಹೋರಿ ಕೆರೆಗೆ ಜಿಗಿಯುತ್ತಿದ್ದಂತೆ ಸ್ಥಳೀಯರು ಕೂಡ ಕೆರೆಗೆ ಹಾರಿ ಹೋರಿ ರಕ್ಷಣೆಗೆ ತೆರಳಿದ್ದಾರೆ. ಆದರೆ ಅವರ ಪ್ರಯತ್ನ ವ್ಯರ್ಥವಾಗಿದೆ. ಇನ್ನು ಹೋರಿ ಓಡಿ ಬರುವ ರಭಸಕ್ಕೆ ಕೆರೆಗೆ ಜಿಗಿದ ಅಭಿಮಾನಿ ಈಜಿ ಪಾರಾಗಿದ್ದಾನೆ.

ಅಖಾಡದಲ್ಲಿ ಓಡಿ ಬರುತ್ತಿದ್ದ ಹೋರಿ ನೋಡಿ ಜನ ಓಡಿದ್ದರಿಂದ ದಿಕ್ಕು ತೋಚದೆ ಓಟದ ರಭಸದಲ್ಲಿ ಕೆರೆಗೆ ಹಾರಿದೆ. ಹೋರಿಯ ಕಾಲಿಗೆ ಹಗ್ಗ ಸಿಲುಕಿಕೊಂಡು ಹೋರಿ ಕೆರೆಯಿಂದ ಮೇಲೆ ಬಾರದೇ ದುರಂತ ಸಾವು ಕಂಡಿದೆ. ಹೋರಿ ಸಾವಿಗೆ ಹೋರಿ ಅಭಿಮಾನಿಗಳು ಕಂಬನಿ ಮಿಡಿದ್ದಾರೆ. ವರದನಾಯಕ ಹೋರಿ ಓಡಿ ಬಂದು ಕೆರೆಗೆ ಜಿಗಿಯೋ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.


Spread the love

About Laxminews 24x7

Check Also

ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ

Spread the loveಹಾವೇರಿ, ಜೂನ್​ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ  ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ