,ಡಿ.28- ಒಂದು ವೈರಸ್ ರೂಪಾಂತರಗೊಳ್ಳುವುದು ಅದರ ಸಾಮಾನ್ಯ ನಡವಳಿಕೆ. ಇದರ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ತಿಳಿಸಿದ್ದಾರೆ. ಕೊರೊನಾ ವೈರಸ್ ನಮ್ಮ ದೇಶಕ್ಕೆ ಕಾಲಿಟ್ಟು 10 ತಿಂಗಳು ಮುಗಿದಿದೆ. ಒಂದು ವೈರಸ್ ರೂಪಾಂತರಗೊಳ್ಳುವುದು ಅದರ ಸಾಮಾನ್ಯ ನಡವಳಿಕೆ. ಇದರ ಬಗ್ಗೆ ಆತಂಕಪಡಬೇಕಾಗಿಲ್ಲ. ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಕೊರೊನಾ ವೈರಸ್ ಬಂದಾಗ ನಮ್ಮ ದೇಶ ಸಮರ್ಥವಾಗಿ ನಿಭಾಯಿಸಿದೆ ಎಂದರು.
ಫೆಬ್ರವರಿ, ಮಾರ್ಚ್ನಲ್ಲಿ 2ನೇ ಅಲೆ ಬರಬಹುದು. ಸೋಂಕಿನ ಪ್ರಮಾಣವನ್ನು ನೋಡಿ ತೀರ್ಮಾನ ಮಾಡಬೇಕು. ರೂಪಾಂತರ ವೈರಸ್ ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲೇ ಬಂದಿರಬಹುದು. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.