ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಬೆಳಗಾವಿ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ನನ್ನ ನಾಮಪತ್ರವನ್ನು ಇಂದು ಸಲ್ಲಿಸುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ನನ್ನ ಮೊದಲ ಹೆಜ್ಜೆಯನ್ನು ಇಟ್ಟಿದ್ದೇನೆ.
ಈ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದ ಹಿರಿಯ ನಾಯಕರು ಶ್ರೀ ಬಾಲಚಂದ್ರ ಜಾರಕಿಹೊಳಿ, ಶ್ರೀ ಅಣ್ಣಾಸಾಹೇಬ ಜೊಲ್ಲೆ, ಶ್ರೀ ಚನ್ನರಾಜ ಹಟ್ಟಿಹೊಳಿ ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.
ಸಹಕಾರದ ಸಿದ್ಧಾಂತಗಳನ್ನು ಬೆಂಬಲಿಸಿ ಜನರ ಸೇವೆಗೆ ಸಮರ್ಪಿತರಾಗಿರುವ ನನ್ನ ಪ್ರಯತ್ನಕ್ಕೆ ಎಲ್ಲರ ಆಶೀರ್ವಾದ ಹಾಗೂ ಸಹಕಾರ ದೊರೆಯಲಿ ಎಂಬುದು ನನ್ನ ಹಾರೈಕೆ.
ಈ ಅವಕಾಶವನ್ನು ಕಲ್ಪಿಸಿದ ಜಿಲ್ಲಾ ಸಹಕಾರಿ ಕ್ಷೇತ್ರದ ಎಲ್ಲಾ ನಾಯಕರಿಗೆ ಹೃತ್ಪೂರ್ವಕ ಧನ್ಯವಾದಗಳು.
ಸಹಕಾರಂ ಗೆಲ್ಗೆ ಸಹಕಾರಂ ಬಾಳ್ಗೆ
Laxmi News 24×7